4:44 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಂಜನಗೂಡು: ರೈತ ಫಲಾನುಭವಿಗಳಿಗೆ ವಿವಿಧ ಕೃಷಿ ಯಂತ್ರೋಪಕರಣಗಳ ವಿತರಣೆ

16/11/2024, 17:55

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೃಷಿ ಇಲಾಖೆ ವತಿಯಿಂದ 2024- 25ನೇ ಸಾಲಿಗೆ ರೈತ ಫಲಾನುಭವಿಗಳಿಗೆ ವಿವಿಧ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಲಾಯಿತು.


ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ದ್ರುವ ನಾರಾಯಣ್ ಹಾಗೂ ಮತ್ತಿತರ ಗಣ್ಯರು ಗಿಡಕ್ಕೆ ನೀರೆರೆಯುವ ಮೂಲಕ ನೆರವೇರಿಸಿದರು. ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಇಂದಿನ ಆಧುನಿಕ ಕೃಷಿಗೆ ಕೃಷಿ ಯಂತ್ರೋಪಕರಣಗಳ ಅವಶ್ಯಕತೆ ಇದೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಇಂದು ರೈತರಿಗೆ ಈ ಯಂತ್ರೋಪಕರಣಗಳು ವರದಾನವಾಗಿವೆ. ಹಾಗಾಗಿ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಸಿಗುವ ಈ ಕೃಷಿ ಯಂತ್ರೋಪಕರಣಗಳನ್ನು ಪಡೆದುಕೊಂಡು ರೈತರು ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ರವಿ ಮಾತನಾಡಿ, ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಬಗ್ಗೆ ತಿಳಿಸಿ ಪರಿಶಿಷ್ಟ ಜಾತಿ ಪಂಗಡ ದ ರೈತರಿಗೆ ಶೇ.90ರಷ್ಟು ರಿಯಾಯಿತಿ ಸಿಗಲಿದೆ. ಸಾಮಾನ್ಯ ವರ್ಗದ ರೈತರಿಗೆ 50% ರಿಯಾಯಿತಿ ದರದಲ್ಲಿ ವಿವಿಧ ಬಗೆಯ ಕೃಷಿ ಯಂತ್ರೋಪಕರಣಗಳು ಸಿಗಲಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭ ತಾಲೂಕಿನ ನೂರಾರು ರೈತ ಪಲಾನುಭವಿಗಳಿಗೆ ಶಾಸಕರು ಟ್ರಾಕ್ಟರ್, ಟಿಲ್ಲರ್, ಡೀಸೆಲ್ ಪಂಪ್ ಮೋಟಾರ್ ಗಳು, ಪೈಪ್ ಗಳು, ಸ್ಪ್ರಿಂಕ್ಲರ್ ಗಳು ಸೇರಿದಂತೆ ಲಕ್ಷಾಂತರ ರೂಪಾಯಿ ವಿವಿಧ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಸದಸ್ಯೆ ಗಾಯತ್ರಿ ಮೋಹನ್, ಟಿಎಪಿಸಿಎಂಎಸ್ ಅಧ್ಯಕ್ಷ ಕುರಟ್ಟಿ ಮಹೇಶ್, ಮುಖಂಡರಾದ ನಾಗೇಶ್ ರಾಜ್, ಕರಳಪುರ ನಾಗರಾಜ್, ಜಿಲ್ಲಾ ಕೃಷಿಸಹಾಯಕ ನಿರ್ದೇಶಕರಾದ ಧನಂಜಯ್, ಕೃಷಿ ಸಹಾಯಕ ನಿರ್ದೇಶಕ ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು