3:58 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂಜನಗೂಡು: ರೈತ ಫಲಾನುಭವಿಗಳಿಗೆ ವಿವಿಧ ಕೃಷಿ ಯಂತ್ರೋಪಕರಣಗಳ ವಿತರಣೆ

16/11/2024, 17:55

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೃಷಿ ಇಲಾಖೆ ವತಿಯಿಂದ 2024- 25ನೇ ಸಾಲಿಗೆ ರೈತ ಫಲಾನುಭವಿಗಳಿಗೆ ವಿವಿಧ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಲಾಯಿತು.


ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ದ್ರುವ ನಾರಾಯಣ್ ಹಾಗೂ ಮತ್ತಿತರ ಗಣ್ಯರು ಗಿಡಕ್ಕೆ ನೀರೆರೆಯುವ ಮೂಲಕ ನೆರವೇರಿಸಿದರು. ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಇಂದಿನ ಆಧುನಿಕ ಕೃಷಿಗೆ ಕೃಷಿ ಯಂತ್ರೋಪಕರಣಗಳ ಅವಶ್ಯಕತೆ ಇದೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಇಂದು ರೈತರಿಗೆ ಈ ಯಂತ್ರೋಪಕರಣಗಳು ವರದಾನವಾಗಿವೆ. ಹಾಗಾಗಿ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಸಿಗುವ ಈ ಕೃಷಿ ಯಂತ್ರೋಪಕರಣಗಳನ್ನು ಪಡೆದುಕೊಂಡು ರೈತರು ತಮ್ಮ ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ರವಿ ಮಾತನಾಡಿ, ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಬಗ್ಗೆ ತಿಳಿಸಿ ಪರಿಶಿಷ್ಟ ಜಾತಿ ಪಂಗಡ ದ ರೈತರಿಗೆ ಶೇ.90ರಷ್ಟು ರಿಯಾಯಿತಿ ಸಿಗಲಿದೆ. ಸಾಮಾನ್ಯ ವರ್ಗದ ರೈತರಿಗೆ 50% ರಿಯಾಯಿತಿ ದರದಲ್ಲಿ ವಿವಿಧ ಬಗೆಯ ಕೃಷಿ ಯಂತ್ರೋಪಕರಣಗಳು ಸಿಗಲಿದ್ದು ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭ ತಾಲೂಕಿನ ನೂರಾರು ರೈತ ಪಲಾನುಭವಿಗಳಿಗೆ ಶಾಸಕರು ಟ್ರಾಕ್ಟರ್, ಟಿಲ್ಲರ್, ಡೀಸೆಲ್ ಪಂಪ್ ಮೋಟಾರ್ ಗಳು, ಪೈಪ್ ಗಳು, ಸ್ಪ್ರಿಂಕ್ಲರ್ ಗಳು ಸೇರಿದಂತೆ ಲಕ್ಷಾಂತರ ರೂಪಾಯಿ ವಿವಿಧ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಸದಸ್ಯೆ ಗಾಯತ್ರಿ ಮೋಹನ್, ಟಿಎಪಿಸಿಎಂಎಸ್ ಅಧ್ಯಕ್ಷ ಕುರಟ್ಟಿ ಮಹೇಶ್, ಮುಖಂಡರಾದ ನಾಗೇಶ್ ರಾಜ್, ಕರಳಪುರ ನಾಗರಾಜ್, ಜಿಲ್ಲಾ ಕೃಷಿಸಹಾಯಕ ನಿರ್ದೇಶಕರಾದ ಧನಂಜಯ್, ಕೃಷಿ ಸಹಾಯಕ ನಿರ್ದೇಶಕ ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು