6:49 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಬೋಂದೆಲ್ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ: ಬೃಹತ್ ಹೊರೆಕಾಣಿಕೆ ಮೆರವಣಿಗೆ

16/11/2024, 20:50

ಮಂಗಳೂರು(reporterkarnataka.com): ನಗರದ ಬೋಂದೆಲ್ ನ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಗರದ ಮೇರಿ ಹಿಲ್‌ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.

ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲರಾದ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರು. ಸಂತ ಲಾರೆನ್ಸ್ ಚರ್ಚ್ ನ ಪ್ರಧಾನ ಧರ್ಮ ಗುರು ಫಾ‌. ಆ್ಯಂಡ್ರೂ ಲಿಯೋ ಡಿಸೋಜ ಹೊರೆಕಾಣಿಗಳಿಗೆ ಪವಿತ್ರ ನೀರು ಸಿಂಪಡಣೆ ನೆರವೇರಿಸಿದರುಮ ಕಾರ್ಯಕ್ರಮದಲ್ಲಿ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರು ಫಾ.ಜೇಮ್ಸ್ ಡಿಸೋಜ, ಬೆಥರಾಂ ಫಾರ್ಮೇಶನ್ ಹೌಸ್ ಸುಪೀರಿಯರ್ ಫಾ. ಅರುಣ್, ಪ್ರೆಸೆಂಟೇಶನ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಲೀಲಾ, ಮೌಂಟ್ ಕಾರ್ಮೆಲ್ ಸ್ಕೂಲ್ ಪ್ರಾಂಶುಪಾಲೆ ಸಿಸ್ಟರ್ ಮೆಲಿಸಾ, ಸಂತ ಲಾರೆನ್ಸ್ ಚರ್ಚ್ ಸಹಾಯಕ ಧರ್ಮಗುರು ಫಾ‌. ವಿಲಿಯಂ ಡಿಸೋಜ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜಾನ್ ಡಿಸಿಲ್ವ, ಕಾರ್ಯದರ್ಶಿ ಸಂತೋಷ್ ಮಿಸ್ಕಿತ್, ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರಿನ ಮೇರಿ ಹಿಲ್‌ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು.
ಕಾರ್ಯಕ್ರಮಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು, ಆಶೀರ್ವಚನ ಕಾರ್ಯವನ್ನು ಸಂತ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾಂಶುಪಾಲರಾದ ಫಾ. ಪೀಟರ್ ಗೊನ್ಸಾಲ್ವಿಸ್ ನಡೆಸಿದರು. ಸಂತ ಲಾರೆನ್ಸ್ ಚರ್ಚ್ ನ ಪ್ರಧಾನ ಧರ್ಮ ಗುರು ಫಾ‌. ಆ್ಯಂಡ್ರೂ ಲಿಯೋ ಡಿಸೋಜ ಹೊರೆಕಾಣಿಗಳಿಗೆ ಪವಿತ್ರ ನೀರು ಸಿಂಪಡಣೆ ನೆರವೇರಿಸಿದರುಮ ಕಾರ್ಯಕ್ರಮದಲ್ಲಿ ಮಂಗಳೂರು ಸಿಟಿ ವಲಯದ ಪ್ರಧಾನ ಧರ್ಮಗುರು ಫಾ.ಜೇಮ್ಸ್ ಡಿಸೋಜ, ಬೆಥರಾಂ ಫಾರ್ಮೇಶನ್ ಹೌಸ್ ಸುಪೀರಿಯರ್ ಫಾ. ಅರುಣ್, ಪ್ರೆಸೆಂಟೇಶನ್ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಲೀಲಾ, ಮೌಂಟ್ ಕಾರ್ಮೆಲ್ ಸ್ಕೂಲ್ ಪ್ರಾಂಶುಪಾಲೆ ಸಿಸ್ಟರ್ ಮೆಲಿಸಾ, ಸಂತ ಲಾರೆನ್ಸ್ ಚರ್ಚ್ ಸಹಾಯಕ ಧರ್ಮಗುರು ಫಾ‌. ವಿಲಿಯಂ ಡಿಸೋಜ, ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಜಾನ್ ಡಿಸಿಲ್ವ, ಕಾರ್ಯದರ್ಶಿ ಸಂತೋಷ್ ಮಿಸ್ಕಿತ್, ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು