6:27 PM Saturday3 - January 2026
ಬ್ರೇಕಿಂಗ್ ನ್ಯೂಸ್
ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ

ಇತ್ತೀಚಿನ ಸುದ್ದಿ

ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು: ಪನೀಂಧರ್

18/11/2024, 14:43

ಬಂಟ್ವಾಳ(reporterkarnataka.com):ಬಂಟ್ವಾಳ ವಕೀಲರ ಸಂಘ ಮತ್ತು ಕ್ಲೂ ಫಾರ್ ಎವಿಡೆನ್ಸ್ ಫೌಂಡೇಶನ್ (CLUE 4 EVIDENCE FOUNDATION) ಜಂಟಿ ಆಶ್ರಯದಲ್ಲಿ ಬಂಟ್ವಾಳ ವಕೀಲರ ಸಂಘದಲ್ಲಿ ವಿಧಿ ವಿಜ್ಞಾನ ಜಾಗ್ರತಿ ಕಾರ್ಯಾಗಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ CLUE 4 FOUNDATION ನ ನಿರ್ದೇಶಕರಾದ ಪನೀಂಧರ್ ಬಿ.ಎನ್. ಅವರು ವಕೀಲರಿಗೆ ವಿಧಿ ವಿಜ್ಞಾನದ ಜಾಗ್ರತಿಯ ಅಗತ್ಯತೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಕೇಂದ್ರ ಸರಕಾರ ಹೊಸದಾಗಿ ಜಾರಿಗೆ ತಂದ ಭಾರತೀಯ ನ್ಯಾಯ ಸಂಹಿತೆ ಕಾನೂನಿನಲ್ಲಿ 3 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆಯ ಅಪರಾಧಗಳಿಗೆ ವಿಧಿ ವಿಜ್ಞಾನದ ವರದಿ ಕಡ್ಡಾಯವಾಗಿದೆ. ಆದುದರಿಂದ ವಕೀಲರಿಗೆ ವಿಧಿ ವಿಜ್ಞಾನದ ಬಗ್ಗೆ ಮಾಹಿತಿ ಅತೀ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಅಪರಾಧ ಕಡಿಮೆಯಾಗಲಿದ್ದು, ಡಿಜಿಟಲ್ ಅಪರಾಧಗಳು ಹೆಚ್ಚಾಗಳಿದ್ದು ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು ಎಂದು ವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿದ್ದರು.
ಬಂಟ್ವಾಳ ವಕೀಲರ ಸಂಘ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ರವೀಂದ್ರ ಕುಕ್ಕಾಜೆ ನಿರ್ವಹಿಸಿದರು. ಅತಿಥಿ ಅಭ್ಯಾಗತರಿಗೆ ವೀರೇಂದ್ರ ಎಂ.ಸಿದ್ದಕಟ್ಟೆಯವರು ವಂದನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು