6:49 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು: ಪನೀಂಧರ್

18/11/2024, 14:43

ಬಂಟ್ವಾಳ(reporterkarnataka.com):ಬಂಟ್ವಾಳ ವಕೀಲರ ಸಂಘ ಮತ್ತು ಕ್ಲೂ ಫಾರ್ ಎವಿಡೆನ್ಸ್ ಫೌಂಡೇಶನ್ (CLUE 4 EVIDENCE FOUNDATION) ಜಂಟಿ ಆಶ್ರಯದಲ್ಲಿ ಬಂಟ್ವಾಳ ವಕೀಲರ ಸಂಘದಲ್ಲಿ ವಿಧಿ ವಿಜ್ಞಾನ ಜಾಗ್ರತಿ ಕಾರ್ಯಾಗಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ CLUE 4 FOUNDATION ನ ನಿರ್ದೇಶಕರಾದ ಪನೀಂಧರ್ ಬಿ.ಎನ್. ಅವರು ವಕೀಲರಿಗೆ ವಿಧಿ ವಿಜ್ಞಾನದ ಜಾಗ್ರತಿಯ ಅಗತ್ಯತೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಕೇಂದ್ರ ಸರಕಾರ ಹೊಸದಾಗಿ ಜಾರಿಗೆ ತಂದ ಭಾರತೀಯ ನ್ಯಾಯ ಸಂಹಿತೆ ಕಾನೂನಿನಲ್ಲಿ 3 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆಯ ಅಪರಾಧಗಳಿಗೆ ವಿಧಿ ವಿಜ್ಞಾನದ ವರದಿ ಕಡ್ಡಾಯವಾಗಿದೆ. ಆದುದರಿಂದ ವಕೀಲರಿಗೆ ವಿಧಿ ವಿಜ್ಞಾನದ ಬಗ್ಗೆ ಮಾಹಿತಿ ಅತೀ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಅಪರಾಧ ಕಡಿಮೆಯಾಗಲಿದ್ದು, ಡಿಜಿಟಲ್ ಅಪರಾಧಗಳು ಹೆಚ್ಚಾಗಳಿದ್ದು ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು ಎಂದು ವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿದ್ದರು.
ಬಂಟ್ವಾಳ ವಕೀಲರ ಸಂಘ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ರವೀಂದ್ರ ಕುಕ್ಕಾಜೆ ನಿರ್ವಹಿಸಿದರು. ಅತಿಥಿ ಅಭ್ಯಾಗತರಿಗೆ ವೀರೇಂದ್ರ ಎಂ.ಸಿದ್ದಕಟ್ಟೆಯವರು ವಂದನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು