7:28 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ದಕ್ಷಿಣ ಕಾಶಿ ನಂಜನಗೂಡಿಗೆ ಹರಿದು ಬಂದ ಭಕ್ತ ಸಾಗರ

18/11/2024, 18:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಶುಭ ಸೋಮವಾರದ ಪ್ರಯುಕ್ತ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂತು. ಬೆಳಗಿನ ಜಾವ ಐದು ಗಂಟೆಯಿಂದಲೇ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿವಿಧ ಅಭಿಷೇಕ ಪೂಜೆಗಳನ್ನು ನೆರವೇರಿಸಲಾಯಿತು.


ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಬಂದ ಭಕ್ತರು ಮುಡಿಸೇವೆ ಉರುಳು ಸೇವೆ ತುಲಾಭಾರ ಸೇವೆಗಳನ್ನು ಮುಗಿಸಿ ಸರತಿ ಸಾಲಿನಲ್ಲಿ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು. ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ದೇವಾಲಯದ ಒಳಗೆ ಪ್ರವೇಶಿಸಲು ಭಕ್ತರು ಗಂಟೆಗಟ್ಟಲೆ ಕಾಯುವ ಮುಖಾಂತರ ಹರಸಾಹಸ ಪಡಬೇಕಾಯಿತು.
ದೇವಾಲಯದ ಒಳಗೆ ಪ್ರವೇಶಿಸಲು ಆಗದ ಸಾವಿರಾರು ಭಕ್ತರು ದೇವಾಲಯದ ಮುಂಭಾಗ ಹೊರ ಆವರಣದಲ್ಲಿಯೇ ಪೂಜೆ ಸಲ್ಲಿಸಿ ದೀಪಾರಥಿಗಳನ್ನು ಬೆಳಗುವ ಮೂಲಕ ಅಲ್ಲಿಂದಲೇ ತಮ್ಮ ಭಕ್ತಿ ಭಾವ ಸಮರ್ಪಿಸಿದರು.
ನಿತ್ಯ ದಾಸೋಹದಂತೆ ದಾನಿ ಒಬ್ಬರು ಬಂದ ಎಲ್ಲಾ ಭಕ್ತರಿಗೆ ಇಂದಿನ ಒಂದು ದಿನದ ದಾಸೋಹದ ಸೇವೆಯನ್ನು ಒದಗಿಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.
ದೇವಾಲಯದ ವತಿಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತಾದರೂ ಸರಿಯಾದ ನಿರ್ವಹಣೆ ಇಲ್ಲದೆ ಘರ್ಷಣೆಗೆ ಕಾರಣವಾಗಿ ಮುಚ್ಚಲಾಯಿತು.
ಇದರಿಂದಾಗಿ ದೂರ ದೂರದ ಊರುಗಳಿಂದ ಬಂದ ಕೆಲ ಹಿರಿಯ ನಾಗರಿಕರು ದೇವಸ್ಥಾನದ ಒಳ ಹೋಗಲಾರದೆ ಹಾಗೂ ದೇವರ ದರ್ಶನ ಪಡೆಯಲಾಗದೆ ಹಿಂದಿರುಗಿರುವ ಘಟನೆಗಳು ನಡೆದವು. ಅಲ್ಲದೆ ಭಕ್ತರ ಅನುಕೂಲಕ್ಕಾಗಿ ಹಾಗೂ ಉರುಳು ಸೇವೆಗಾಗಿ ಶಾಮಿಯಾನ ಹಾಕಿದ್ದ ಜಾಗದಲ್ಲಿ ಹಾಗೂ ಹಳ್ಳದ ಕೇರಿಗೆ ಹೋಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಾರುಗಳನ್ನು ನಿಲ್ಲಿಸುವ ಮೂಲಕ ಸಂಚಾರ ಅಡಚಣೆಗೆ ಕಾರಣವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಟ್ಟ ದೇವಾಲಯ ಹಾಗೂ ನಗರಸಭೆ ಆಡಳಿತ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ದೇವಾಲಯಕ್ಕೆ ಭಕ್ತರ ಮಹಾ ಪೂರವೇ ಹರಿದು ಬಂದ ಕಾರಣ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಸಹ ಹರಸಾಹಸ ಪಡಬೇಕಾಯಿತು.
ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರು ಮಾತನಾಡಿ ವಿಶೇಷತೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು