12:58 AM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ದಕ್ಷಿಣ ಕಾಶಿ ನಂಜನಗೂಡಿಗೆ ಹರಿದು ಬಂದ ಭಕ್ತ ಸಾಗರ

18/11/2024, 18:49

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸದ ಶುಭ ಸೋಮವಾರದ ಪ್ರಯುಕ್ತ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂತು. ಬೆಳಗಿನ ಜಾವ ಐದು ಗಂಟೆಯಿಂದಲೇ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿವಿಧ ಅಭಿಷೇಕ ಪೂಜೆಗಳನ್ನು ನೆರವೇರಿಸಲಾಯಿತು.


ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಬಂದ ಭಕ್ತರು ಮುಡಿಸೇವೆ ಉರುಳು ಸೇವೆ ತುಲಾಭಾರ ಸೇವೆಗಳನ್ನು ಮುಗಿಸಿ ಸರತಿ ಸಾಲಿನಲ್ಲಿ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು. ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ದೇವಾಲಯದ ಒಳಗೆ ಪ್ರವೇಶಿಸಲು ಭಕ್ತರು ಗಂಟೆಗಟ್ಟಲೆ ಕಾಯುವ ಮುಖಾಂತರ ಹರಸಾಹಸ ಪಡಬೇಕಾಯಿತು.
ದೇವಾಲಯದ ಒಳಗೆ ಪ್ರವೇಶಿಸಲು ಆಗದ ಸಾವಿರಾರು ಭಕ್ತರು ದೇವಾಲಯದ ಮುಂಭಾಗ ಹೊರ ಆವರಣದಲ್ಲಿಯೇ ಪೂಜೆ ಸಲ್ಲಿಸಿ ದೀಪಾರಥಿಗಳನ್ನು ಬೆಳಗುವ ಮೂಲಕ ಅಲ್ಲಿಂದಲೇ ತಮ್ಮ ಭಕ್ತಿ ಭಾವ ಸಮರ್ಪಿಸಿದರು.
ನಿತ್ಯ ದಾಸೋಹದಂತೆ ದಾನಿ ಒಬ್ಬರು ಬಂದ ಎಲ್ಲಾ ಭಕ್ತರಿಗೆ ಇಂದಿನ ಒಂದು ದಿನದ ದಾಸೋಹದ ಸೇವೆಯನ್ನು ಒದಗಿಸಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ.
ದೇವಾಲಯದ ವತಿಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತಾದರೂ ಸರಿಯಾದ ನಿರ್ವಹಣೆ ಇಲ್ಲದೆ ಘರ್ಷಣೆಗೆ ಕಾರಣವಾಗಿ ಮುಚ್ಚಲಾಯಿತು.
ಇದರಿಂದಾಗಿ ದೂರ ದೂರದ ಊರುಗಳಿಂದ ಬಂದ ಕೆಲ ಹಿರಿಯ ನಾಗರಿಕರು ದೇವಸ್ಥಾನದ ಒಳ ಹೋಗಲಾರದೆ ಹಾಗೂ ದೇವರ ದರ್ಶನ ಪಡೆಯಲಾಗದೆ ಹಿಂದಿರುಗಿರುವ ಘಟನೆಗಳು ನಡೆದವು. ಅಲ್ಲದೆ ಭಕ್ತರ ಅನುಕೂಲಕ್ಕಾಗಿ ಹಾಗೂ ಉರುಳು ಸೇವೆಗಾಗಿ ಶಾಮಿಯಾನ ಹಾಕಿದ್ದ ಜಾಗದಲ್ಲಿ ಹಾಗೂ ಹಳ್ಳದ ಕೇರಿಗೆ ಹೋಗುವ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಾರುಗಳನ್ನು ನಿಲ್ಲಿಸುವ ಮೂಲಕ ಸಂಚಾರ ಅಡಚಣೆಗೆ ಕಾರಣವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿಕೊಟ್ಟ ದೇವಾಲಯ ಹಾಗೂ ನಗರಸಭೆ ಆಡಳಿತ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ದೇವಾಲಯಕ್ಕೆ ಭಕ್ತರ ಮಹಾ ಪೂರವೇ ಹರಿದು ಬಂದ ಕಾರಣ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಸಹ ಹರಸಾಹಸ ಪಡಬೇಕಾಯಿತು.
ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರು ಮಾತನಾಡಿ ವಿಶೇಷತೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು