4:39 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ ನಾಯಕ

18/11/2024, 20:32

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ.23ರ ವರೆಗೂ ನೀರು ಹರಿಸುವ ನಿರ್ಣಯ ಕೈಗೊಂಡಿದ್ದು, ಇದರಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ನರಸಿಂಹನಾಯಕ (ರಾಜೂ ಗೌಡ) ಹೇಳಿದರು.
ತಾಲೂಕಿನ ಕೊಡೇಕಲ್ ಗ್ರಾಮದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಆಲ ಮಟ್ಟಿ-ನಾರಾಯಣಪುರ ಜಲಾಶಯದಲ್ಲಿ ಒಟ್ಟು 124 ಟಿಎಂಸಿ ನೀರು ಇದ್ದರೂ10 ದಿನ ಬಂದ್‌ನಿರ್ಧಾರ ಅವೈಜ್ಞಾನಿಕವಾಗಿದೆ. ನಮ್ಮ ಭಾಗದ ಶಾಸಕರು ಹಾಗೂ ಸಚಿವರು ರೈತರ ಬಗ್ಗೆ ಸಭೆಯಲ್ಲಿ ಧ್ವನಿ ಎತ್ತದೆ ಇರುವುದೇ ರೈತರಿಗೆ ದೊಡ್ಡ ಸಮಸ್ಯೆ ಎಂದರು.

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಸಲಹಾ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗುತ್ತಿದೆ. ಹೀಗಾಗಿ ಹೆಚ್ಚಿನ ನೀರಾವರಿ ಪ್ರದೇಶ ರಾಯಚೂರು- ಯಾದಗಿರಿ- ಕಲಬುರಗಿ ಭಾಗದಲ್ಲಿ ಹೊಂದಲಾಗಿದೆ. ಆ ಭಾಗದ ಸಚಿವರು ಕಬ್ಬು ಬೆಳೆಯುವ ರೈತರ ಹಿತ ಕಾಪಾಡಲು ಜಲಾಶಯದಲ್ಲಿ ಟಿಎಂಸಿ ನೀರು ಹಿಡಿದಿಟ್ಟುಕೊಂಡಿದ್ದಾರೆ. ಆದರೆ, ನಮ್ಮ ಭಾಗದ ರೈತರ ಹಿತದೃಷ್ಟಿಯಿಂದ ಸಭೆಗೆ ಹಾಜರಾಗಿ ಒಕ್ಕೂರಲಿನಿಂದ ನೀರು ಬಿಡಿಸುವ ಪ್ರಯತ್ನ ಜನಪ್ರತಿನಿಧಿಗಳು ಮಾಡುತ್ತಿಲ್ಲ. ನೀರು ನಿರ್ವಹಣೆ ಮಾಹಿತಿ ಕೊರತೆ ಇದೆ. ರೈತರೊಬ್ಬರನ್ನು ಸಮಿತಿಯಲ್ಲಿ ಸದಸ್ಯರನ್ನಾಗಿ ಮಾಡಿಲ್ಲ, ಇದು ದುರ್ದೈವ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ವಿಷಯದ ಬಗ್ಗೆ ಪ್ರಸ್ತಾಪಿಸಿದ ಅವರು, ರೈತರಿಗೆ ಸಮರ್ಪಕ ನೀರು ಬಿಡದೆ ಮೋಸ ಮಾಡಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದರು. ಏಪ್ರಿಲ್ 20ರವರೆಗೂ ವಾರಾಬಂದಿ ಅನುಸರಿಸದೆ, ಕಾಲುವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು