10:53 PM Sunday10 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ ನಾಯಕ

18/11/2024, 20:32

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ.23ರ ವರೆಗೂ ನೀರು ಹರಿಸುವ ನಿರ್ಣಯ ಕೈಗೊಂಡಿದ್ದು, ಇದರಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ನರಸಿಂಹನಾಯಕ (ರಾಜೂ ಗೌಡ) ಹೇಳಿದರು.
ತಾಲೂಕಿನ ಕೊಡೇಕಲ್ ಗ್ರಾಮದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಆಲ ಮಟ್ಟಿ-ನಾರಾಯಣಪುರ ಜಲಾಶಯದಲ್ಲಿ ಒಟ್ಟು 124 ಟಿಎಂಸಿ ನೀರು ಇದ್ದರೂ10 ದಿನ ಬಂದ್‌ನಿರ್ಧಾರ ಅವೈಜ್ಞಾನಿಕವಾಗಿದೆ. ನಮ್ಮ ಭಾಗದ ಶಾಸಕರು ಹಾಗೂ ಸಚಿವರು ರೈತರ ಬಗ್ಗೆ ಸಭೆಯಲ್ಲಿ ಧ್ವನಿ ಎತ್ತದೆ ಇರುವುದೇ ರೈತರಿಗೆ ದೊಡ್ಡ ಸಮಸ್ಯೆ ಎಂದರು.

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಸಲಹಾ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗುತ್ತಿದೆ. ಹೀಗಾಗಿ ಹೆಚ್ಚಿನ ನೀರಾವರಿ ಪ್ರದೇಶ ರಾಯಚೂರು- ಯಾದಗಿರಿ- ಕಲಬುರಗಿ ಭಾಗದಲ್ಲಿ ಹೊಂದಲಾಗಿದೆ. ಆ ಭಾಗದ ಸಚಿವರು ಕಬ್ಬು ಬೆಳೆಯುವ ರೈತರ ಹಿತ ಕಾಪಾಡಲು ಜಲಾಶಯದಲ್ಲಿ ಟಿಎಂಸಿ ನೀರು ಹಿಡಿದಿಟ್ಟುಕೊಂಡಿದ್ದಾರೆ. ಆದರೆ, ನಮ್ಮ ಭಾಗದ ರೈತರ ಹಿತದೃಷ್ಟಿಯಿಂದ ಸಭೆಗೆ ಹಾಜರಾಗಿ ಒಕ್ಕೂರಲಿನಿಂದ ನೀರು ಬಿಡಿಸುವ ಪ್ರಯತ್ನ ಜನಪ್ರತಿನಿಧಿಗಳು ಮಾಡುತ್ತಿಲ್ಲ. ನೀರು ನಿರ್ವಹಣೆ ಮಾಹಿತಿ ಕೊರತೆ ಇದೆ. ರೈತರೊಬ್ಬರನ್ನು ಸಮಿತಿಯಲ್ಲಿ ಸದಸ್ಯರನ್ನಾಗಿ ಮಾಡಿಲ್ಲ, ಇದು ದುರ್ದೈವ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ವಿಷಯದ ಬಗ್ಗೆ ಪ್ರಸ್ತಾಪಿಸಿದ ಅವರು, ರೈತರಿಗೆ ಸಮರ್ಪಕ ನೀರು ಬಿಡದೆ ಮೋಸ ಮಾಡಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದರು. ಏಪ್ರಿಲ್ 20ರವರೆಗೂ ವಾರಾಬಂದಿ ಅನುಸರಿಸದೆ, ಕಾಲುವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು