2:32 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಹೆಬ್ರಿ: ಎಎನ್ ಎಫ್-ನಕ್ಸಲರ ನಡುವೆ ಗುಂಡಿನ ಕಾಳಗ; ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಸಾವು

19/11/2024, 09:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು/ ಉಡುಪಿ
info.reporterkarnataka@gmail.com
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಸಮೀಪದ ಕಬ್ಬಿನಾಲೆ ಬಳಿ ನಕ್ಸಲ್ ನಿಗ್ರಹ ದಳ(ಎಎನ್ ಎಫ್) ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್​ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ಈ ಕೂಂಬಿಂಗ್​​ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಗೆ ಈತ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. ಹತನಾಗಿದರುವ ವಿಕ್ರಮ್ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ.
ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಡಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.
ನಂತರ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನಗಳು ವ್ಯಕ್ತವಾಗಿವೆ. ಕಳೆದ 15 ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್‌ ಕೂಂಬಿಂಗ್ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು