2:00 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದ ಮೆರವಣಿಗೆ: ಪೂರ್ವಭಾವಿ ಸಭೆ

19/11/2024, 18:44

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ 2025 ಜನವರಿ 5ರಂದು ನಡೆಯಲಿದ್ದು, ಇದರ ಬಗ್ಗೆ ಪೂರ್ವಬಾವಿ ಸಭೆಯನ್ನು ಬಿಷಪ್ ಹೌಸ್‌ನಲ್ಲಿ ನಡೆಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ ವಹಿಸಿ, ಕಾರ್ಯಕ್ರಮದ ಬಗ್ಗೆ ರೂಪುರೇಖೆಯನ್ನು ವಿವರಿಸಿದರು. ಈ ಸಭೆಯಲ್ಲಿ ಧರ್ಮಪ್ರಾತ್ಯದ ಶ್ರೇಷ್ಠ ಗುರು ವಂ| ಪಾ| ಮ್ಯಾಕ್ಸಿಂ ನೊರೊನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ಟಲಿನೋ, ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿ’ಸೋಜಾ ಮುಂತಾದವರು ಉಪಸ್ಥಿತರಿದ್ದರು.
ರೋಯ್ ಕ್ಯಾಸ್ಟಲಿನೋ ಮೆರವಣಿಗೆಯ ಬಗ್ಗೆ ಸ್ವಯಂಸೇವಕರ ಸೇವೆಯ ಬಗ್ಗೆ ರೂಪು ರೇಖೆ ನೀಡಿ ಪ್ರತಿ ಚರ್ಚಿನ ಸ್ವಯಂ ಸೇವಕರು ಅವರು ನಿಲ್ಲುವ ಸ್ಥಳವನ್ನು ತಿಳಿಸಿದರು.
ಈ ಪರಮ ಪ್ರಸಾದದ ಮೆರವಣಿಗೆಯು ಆ ದಿನ ಸಂಜೆ 3 ಗಂಟೆಗೆ ಮಿಲಾಗ್ರಿಸ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಪ್ರಾರಂಭಗೊಳ್ಳಲಿದ್ದು 4.30ಕ್ಕೆ ಮಿಲಾಗ್ರಿಸ್ ಚರ್ಚಿನಿಂದ ಪಾಂಡೇಶ್ವರದ ರೊಸಾರಿಯೊ ಚರ್ಚಿಗೆ ಮೆರವಣಿಗೆ ಮೂಲಕ ಪರಮ ಪ್ರಸಾದ ಕೊಂಡೊಯ್ಯಲಾಗುವುದು. ಚರ್ಚಿನ ತೆರೆದ ಮೈದಾನದಲ್ಲಿ ಪ್ರವಚನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿರುವುದು.
ಸಭೆಯಲ್ಲಿ ಧರ್ಮ ಪ್ರಾಂತ್ಯದ 124 ಚರ್ಚುಗಳಿಂದ ಬಂದ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು