3:03 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದ ಮೆರವಣಿಗೆ: ಪೂರ್ವಭಾವಿ ಸಭೆ

19/11/2024, 18:44

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ 2025 ಜನವರಿ 5ರಂದು ನಡೆಯಲಿದ್ದು, ಇದರ ಬಗ್ಗೆ ಪೂರ್ವಬಾವಿ ಸಭೆಯನ್ನು ಬಿಷಪ್ ಹೌಸ್‌ನಲ್ಲಿ ನಡೆಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂ| ಡಾ| ಪೀಟರ್ ಪಾವ್ಲ್ ಸಲ್ಡಾನ ವಹಿಸಿ, ಕಾರ್ಯಕ್ರಮದ ಬಗ್ಗೆ ರೂಪುರೇಖೆಯನ್ನು ವಿವರಿಸಿದರು. ಈ ಸಭೆಯಲ್ಲಿ ಧರ್ಮಪ್ರಾತ್ಯದ ಶ್ರೇಷ್ಠ ಗುರು ವಂ| ಪಾ| ಮ್ಯಾಕ್ಸಿಂ ನೊರೊನ್ಹಾ, ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್ ಕ್ಯಾಸ್ಟಲಿನೋ, ಕಥೋಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿ’ಸೋಜಾ ಮುಂತಾದವರು ಉಪಸ್ಥಿತರಿದ್ದರು.
ರೋಯ್ ಕ್ಯಾಸ್ಟಲಿನೋ ಮೆರವಣಿಗೆಯ ಬಗ್ಗೆ ಸ್ವಯಂಸೇವಕರ ಸೇವೆಯ ಬಗ್ಗೆ ರೂಪು ರೇಖೆ ನೀಡಿ ಪ್ರತಿ ಚರ್ಚಿನ ಸ್ವಯಂ ಸೇವಕರು ಅವರು ನಿಲ್ಲುವ ಸ್ಥಳವನ್ನು ತಿಳಿಸಿದರು.
ಈ ಪರಮ ಪ್ರಸಾದದ ಮೆರವಣಿಗೆಯು ಆ ದಿನ ಸಂಜೆ 3 ಗಂಟೆಗೆ ಮಿಲಾಗ್ರಿಸ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಪ್ರಾರಂಭಗೊಳ್ಳಲಿದ್ದು 4.30ಕ್ಕೆ ಮಿಲಾಗ್ರಿಸ್ ಚರ್ಚಿನಿಂದ ಪಾಂಡೇಶ್ವರದ ರೊಸಾರಿಯೊ ಚರ್ಚಿಗೆ ಮೆರವಣಿಗೆ ಮೂಲಕ ಪರಮ ಪ್ರಸಾದ ಕೊಂಡೊಯ್ಯಲಾಗುವುದು. ಚರ್ಚಿನ ತೆರೆದ ಮೈದಾನದಲ್ಲಿ ಪ್ರವಚನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿರುವುದು.
ಸಭೆಯಲ್ಲಿ ಧರ್ಮ ಪ್ರಾಂತ್ಯದ 124 ಚರ್ಚುಗಳಿಂದ ಬಂದ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು