1:17 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೆಟ್ಟು ನಿಂತ ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ: ಕೆಎಸ್ಸಾರ್ಟಿಸಿ ಕಂಡೆಕ್ಟರ್ ದಾರುಣ ಸಾವು; ಸಿಬ್ಬಂದಿಗಳಿಂದ ಪ್ರತಿಭಟನೆ

21/11/2024, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕೆಟ್ಟು ನಿಂತಿದ್ದ ಬಸ್ಸಿನ ಚಾಲಕರಿಗೆ ಕಿಟಕಿ ಮೂಲಕ ಊಟ ಕೊಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಂಡೆಕ್ಟರ್ ಸಾವನ್ನಪ್ಪಿದ ದಾರುಣ ಘಟನೆ ನಡೆಯಿತು.


ಅಪಘಾತದಲ್ಲಿ ಕಂಡಕ್ಟರ್ ಅವರನ್ನು ಶ್ರೀನಾಥ್ (40) ಎಂದು ಗುರುತಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಮೃತದೇಹವಿಟ್ಟು ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ನಿನ್ನೆ ಚಿಕ್ಕಮಗಳೂರಿನಿಂದ ಮೈಸೂರಿಗೆ ಹೋಗಿದ್ದ ಸರ್ಕಾರಿ ಬಸ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕೆಟ್ಟು ನಿಂತಿತ್ತು. ಬೆಳಗ್ಗೆ 9 ಗಂಟೆಗೆ ಕೆಟ್ಟ ಬಸ್, ಮೆಕಾನಿಕ್ ಹೋಗಿದ್ದು ರಾತ್ರಿ 9 ಗಂಟೆಗೆ. ಬಸ್ ರಿಪೇರಿ ಮಾಡುವಾಗ ಡ್ರೈವರ್ ಗೆ ಕಿಟಕಿಯಿಂದ ಊಟ ಕೊಡಲು ಕಂಡಕ್ಟರ್ ಹೋದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಕಂಡಕ್ಟರ್ ಸಾವಿಗೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೃತದೇಹವನ್ನು ಡಿಪೋದಲ್ಲಿಟ್ಟು ದಲಿತ ಸಂಘಟನೆಗಳು ಪ್ರತಿಭಟನೆಗಳು ಪ್ರತಿಭಟನೆ ನಡೆಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು