8:02 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕೆಟ್ಟು ನಿಂತ ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ: ಕೆಎಸ್ಸಾರ್ಟಿಸಿ ಕಂಡೆಕ್ಟರ್ ದಾರುಣ ಸಾವು; ಸಿಬ್ಬಂದಿಗಳಿಂದ ಪ್ರತಿಭಟನೆ

21/11/2024, 20:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕೆಟ್ಟು ನಿಂತಿದ್ದ ಬಸ್ಸಿನ ಚಾಲಕರಿಗೆ ಕಿಟಕಿ ಮೂಲಕ ಊಟ ಕೊಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಂಡೆಕ್ಟರ್ ಸಾವನ್ನಪ್ಪಿದ ದಾರುಣ ಘಟನೆ ನಡೆಯಿತು.


ಅಪಘಾತದಲ್ಲಿ ಕಂಡಕ್ಟರ್ ಅವರನ್ನು ಶ್ರೀನಾಥ್ (40) ಎಂದು ಗುರುತಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಡಿಪೋದಲ್ಲಿ ಮೃತದೇಹವಿಟ್ಟು ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ನಿನ್ನೆ ಚಿಕ್ಕಮಗಳೂರಿನಿಂದ ಮೈಸೂರಿಗೆ ಹೋಗಿದ್ದ ಸರ್ಕಾರಿ ಬಸ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕೆಟ್ಟು ನಿಂತಿತ್ತು. ಬೆಳಗ್ಗೆ 9 ಗಂಟೆಗೆ ಕೆಟ್ಟ ಬಸ್, ಮೆಕಾನಿಕ್ ಹೋಗಿದ್ದು ರಾತ್ರಿ 9 ಗಂಟೆಗೆ. ಬಸ್ ರಿಪೇರಿ ಮಾಡುವಾಗ ಡ್ರೈವರ್ ಗೆ ಕಿಟಕಿಯಿಂದ ಊಟ ಕೊಡಲು ಕಂಡಕ್ಟರ್ ಹೋದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಕಂಡಕ್ಟರ್ ಸಾವಿಗೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೃತದೇಹವನ್ನು ಡಿಪೋದಲ್ಲಿಟ್ಟು ದಲಿತ ಸಂಘಟನೆಗಳು ಪ್ರತಿಭಟನೆಗಳು ಪ್ರತಿಭಟನೆ ನಡೆಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು