6:22 PM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ನ.24ಕ್ಕೆ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ: ವಾಹನ ಚಲಾಯಿಸಿ ಕ್ರೀಡಾ ಜ್ಯೋತಿ ರಥಕ್ಕೆ ಚಾಲನೆ ನೀಡಿದ ಗೃಹ ಸಚಿವ ಡಾ. ಪರಮೇಶ್ವರ್

22/11/2024, 13:35

ಬೆಂಗಳೂರು(reporterkarnataka.com): ತುಮಕೂರಿನಲ್ಲಿ ನ.24ರಂದು ನಡೆಯಲಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ಕ್ರೀಡಾ ಜ್ಯೋತಿ ರಥವನ್ನು ಸ್ವತಃ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರೇ ಚಾಲನೆ ಮಾಡುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.


ಕ್ರೀಡಾ ಜ್ಯೋತಿ ರಥದ ವಾಹನವನ್ನು ಗೃಹ ಸಚಿವವರು ಚಲಾಯಿಸಿದರೆ, ಅದಕ್ಕೆ ಅವರ ಪತ್ನಿ ಕನ್ನಿಕಾ ಪರಮೇಶ್ವರ ಅವರು ಹಸಿರು ನಿಶಾನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಜಿ.ಪರಮೇಶ್ವರ ಅವರು, ಪತ್ರಕರ್ತರು ಸದಾ ಒತ್ತಡದ ನಡುವೆ ಕೆಲಸ ಮಾಡುತ್ತಿರುತ್ತಾರೆ. ಮಾನಸಿಕ ಒತ್ತಡ ನಿಭಾಯಿಸಲು ದೈಹಿಕ ವ್ಯಯಾಮ ಚಟುವಟಿಕೆಗಳು ಬಹಳ ಮುಖ್ಯವಾಗಿದೆ. ನಾನೂ ಒಬ್ಬ ಕ್ರೀಡಾಪಟುವಾಗಿ ಈ ಕ್ರೀಡಾಕೂಟ ಆಯೋಜನೆಯಿಂದ ಹಿಡಿದು ಅದರ ಭಾಗವಹಿಸಲು ಹೆಮ್ಮೆಯಾಗುತ್ತದೆ ಎಂದರು.
ಕ್ರೀಡೆ ಎಂದರೆ ಎಲ್ಲರನ್ನೂ ಸೌಹಾರ್ಧಯುತವಾಗಿ ಬೆಸೆಯುವಂತಾದ್ದು. ಈ ರಥಯಾತ್ರೆ ಮೂಲಕ ಸೌಹಾದರ್ಶ ಸಂದೇಶವನ್ನು ಎಲ್ಲೆಡೆ ಸಾರಲಿ ಎಂದು ಅವರು ನುಡಿದರು.
ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಈ ಬಾರಿ ತುಮಕೂರಿನಲ್ಲಿ ರಾಜ್ಯ ಮಟ್ಟದ ಕ್ರೀಡಾ ಕೂಟ ಏರ್ಪಡಿಸಲು ಅವಕಾಶ ನೀಡಿರುವುದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.
ತುಮಕೂರಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಜಿಲ್ಲಾಡಳಿತದ ಪೂರ್ಣ ಸಹಕಾರ ನೀಡಲಾಗುವುದು. ನಮ್ಮ ಅತಿಥಿಗಳಾಗಿ ರಾಜ್ಯದ ಎಲ್ಲಾ ಕಡೆಯಿಂದ ಬರುವ ಪತ್ರಕರ್ತರಿಗೆ ಕಲ್ಪತರ ನಾಡಿನ ಆತಿಥ್ಯ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಚಿ.ನೀ.ಪುರುಷೋತ್ತಮ ಮಾತನಾಡಿ, ಈ ಕ್ರೀಡಾ ಜ್ಯೋತಿಯನ್ನೊತ್ತ ರಥಯಾತ್ರೆಯು ಎಲ್ಲಾ ತಾಲೂಕುಗಲ್ಲಿ ಮೂರು ದಿನ ಸಂಚರಿಸಲಿದೆ ಎಂದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು, ಎಸ್ಪಿ ಕೆ.ವಿ.ಅಶೋಕ್, ಶಾಸಕ ಜ್ಯೋತಿ ಗಣೇಶ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಎಡಿಸಿ ತಿಪ್ಪೇಸ್ವಾಮಿ, ಹಿರಿಯ ಪತ್ರಕರ್ತರಾದ ನಾಗಣ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಮ, ಜಿಲ್ಲಾ ಪದಾಧಿಕಾರಿಗಳಾದ ಶಾಂತರಾಜು, ಮಧುಕರ್, ಡಿ.ಎಂ.ಸತೀಶ್, ಕ್ರೀಡಾ ಸಂಚಾಲಕ ಸತೀಶ್ ಹಾರೋಗೆರೆ, ಪ್ರಚಾರ ಸಮಿತಿ ಅಧ್ಯಕ್ಷ ರಂಗರಾಜು, ಯಶಸ್, ಹರೀಶ್ ಆಚಾರ್ಯ ಮತ್ತಿತರರು ಇದ್ದರು.
ತುಮಕೂರಿನಿಂದ ಹೊರಟ ಕ್ರೀಡಾ ಜ್ಯೋತಿಯ ರಥಕ್ಕೆ ಕುಣಿಗಲ್‌ನಲ್ಲಿ ಸಾಲುಗಟ್ಟ ನಿಂತು ಮೆರವಣಿಗೆ ನಡೆಸುವ ಮೂಲಕ ಭರ್ಜರಿ ಸ್ವಾಗತ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು