7:04 PM Wednesday23 - April 2025
ಬ್ರೇಕಿಂಗ್ ನ್ಯೂಸ್
ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ ಪಡೆಯಿಂದ ಕೈವಶವಾದ ಶಿಗ್ಗಾವಿ

23/11/2024, 16:29

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದಾರೆ. ಸಿ.ಪಿ. ಯೋಗೀಶ್ವರ್ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ಆಗಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರು ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರನ್ನು 14 ಸಾವಿರ ಮತಗಳ ಅಂತರದಲ್ಲಿ ಪರಾಭವಗೊಳಿಸಿದ್ದಾರೆ. ಭರತ್ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ. ಇದು ಬಿಜೆಪಿ ಸತತವಾಗಿ 4 ಬಾರಿ ಗೆದ್ದ ಕ್ಷೇತ್ರವಾಗಿದೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿಂದ ಆಯ್ಕೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಬೊಮ್ಮಾಯಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವ್ ಗೆ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯಲ್ಲಿ ಅವರ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಿಸಿದ್ದರು.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ಸೋಲಿಸುವ ಮೂಲಕ ವಿಧಾನಸಭೆ ಪ್ರವೇಶಿಸಲಿದ್ದಾರೆ.
ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ 2024ರ ನವೆಂಬರ್ 13ರಂದು ನಡೆದಿತ್ತು.
ಚನ್ನಪಟ್ಟಣದಲ್ಲಿ ಅತ್ಯಧಿಕ ಮತದಾನ 88.80% ರಷ್ಟು ಮತದಾನ ನಡೆದರೆ, ಶಿಗ್ಗಾವಿಯಲ್ಲಿ 80.48%ರಷ್ಟು ಹಾಗೂ ಸಂಡೂರಿನಲ್ಲಿ 76.24ರಷ್ಟು ಮತದಾನ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು