6:33 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಗೆಲುವಿನಿಂದ ಜವಾಬ್ದಾರಿ ಹೆಚ್ಚಿದೆ, ಜನರ ನಿರೀಕ್ಷೆ ಈಡೇರಿಸುವೆ: ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ

23/11/2024, 17:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಿನ ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್‌ಗೆ ಮತ್ತೆ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನರ ನಿರೀಕ್ಷೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವುದೆ. ಅದಕ್ಕಾಗಿ ಇಂದಿನಿಂದ ದುಡಿಯುವೆ ಎಂದು ಸಂಡೂರು ಕ್ಷೇತ್ರದ ವಿಜೇತ ಕಾಂಗ್ರೆಸ್‌ ಅಭ್ಯರ್ಥಿ ಇ. ಅನ್ನಪೂರ್ಣ ಹೇಳಿದ್ದಾರೆ.
ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಮೊದಲಿಗೆ ಸಂಡೂರಿನ ಜನತೆಗೆ ಧನ್ಯವಾದ ಅರ್ಪಿಸಿದರು.

ಸಂಡೂರಿನ ಜನ ಯಾವತ್ತೂ ಕಾಂಗ್ರೆಸ್‌ ಕೈ ಬಿಟ್ಟಿಲ್ಲ. ನಮ್ಮ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿಗಳು, ಮಹಿಳೆಯೊಬ್ಬರಿಗೆ ಅವಕಾಶ ಮಾಡಿಕೊಟ್ಟಿದ್ದು, ಒಗ್ಗಟಿನ ಹೋರಾಟ ನಮ್ಮ ಗೆಲುವಿಗೆ ಕಾರಣವಾಗಿದೆ’ ಎಂದರು.
ನನ್ನ ಕ್ಷೇತ್ರದ ಜನ ನನಗೆ ನೀಡಿರುವ ಕೊಡುಗೆಯನ್ನು ನನ್ನ ಸೇವೆಯ ಮೂಲಕ ಮತ್ತೆ ಹಿಂದಿರುಗಿಸುವೆ. ಸಂಡೂರು ಕಾಂಗ್ರೆಸ್‌ ಭದ್ರಕೋಟೆ. ಅದನ್ನು ಭದ್ರಪಡಿಸುವ ಕೆಲಸ ಮಾಡುವುದಾಗಿ ಹೇಳಿದ್ದೆ. ಅದರಂತೆ ನಡೆದುಕೊಳ್ಳುವೆ ಎಂದು ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಶೇ. 49ರಷ್ಟು ಮತ ಸಿಕ್ಕಿತ್ತು. ಈಗ ಶೇ. 51 ಮತ ಸಿಕ್ಕಿದೆ. ಅದರಂತೆ ನೋಡಿದರೆ ನಮ್ಮ ಮತ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಬಳ್ಳಾರಿ ಮತ್ತು ಸಂಡೂರಿನ ಜನ ತುಕಾರಾಂ ಅವರನ್ನು ಸಂಸತ್‌ಗೆ, ನನ್ನನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ್ದಾರೆ. ವೈವಾಹಿಕ ಜೀನದಲ್ಲಿ ಪರಸ್ಪರ ಸಹಕಾರದೊಂದಿಗೆ ಬಾಳ್ವೆ ನಡೆಸಿದ ನಾವು, ರಾಜಕೀಯದಲ್ಲೂ ಪರಸ್ಪರ ಸಹಕರಿಸುತ್ತಲೇ ಕೆಲಸ ಮಾಡುತ್ತೇವೆ ಎಂದು ಅನ್ನಪೂರ್ಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಲೂಕಿನ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಅಡಿಗಲ್ಲು ಹಾಕಿದ್ದಾರೆ. ಸಂಡೂರು ಬಸ್‌ ನಿಲ್ದಾಣಕ್ಕೂ ಭೂಮಿ ಪೂಜೆ ಆಗಿದೆ. ಅದನ್ನು ಬೇಗ ಪೂರ್ಣಗೊಳಿಸುವೆ. ಅವುಗಳನ್ನು ಆದ್ಯತೆಯಾಗಿ ಪರಿಗಣಿಸುವೆ’ ಎಂದು ಇದೇ ವೇಳೆ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು