2:56 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಗೆಲುವಿನಿಂದ ಜವಾಬ್ದಾರಿ ಹೆಚ್ಚಿದೆ, ಜನರ ನಿರೀಕ್ಷೆ ಈಡೇರಿಸುವೆ: ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ

23/11/2024, 17:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಿನ ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್‌ಗೆ ಮತ್ತೆ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನರ ನಿರೀಕ್ಷೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವುದೆ. ಅದಕ್ಕಾಗಿ ಇಂದಿನಿಂದ ದುಡಿಯುವೆ ಎಂದು ಸಂಡೂರು ಕ್ಷೇತ್ರದ ವಿಜೇತ ಕಾಂಗ್ರೆಸ್‌ ಅಭ್ಯರ್ಥಿ ಇ. ಅನ್ನಪೂರ್ಣ ಹೇಳಿದ್ದಾರೆ.
ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಮೊದಲಿಗೆ ಸಂಡೂರಿನ ಜನತೆಗೆ ಧನ್ಯವಾದ ಅರ್ಪಿಸಿದರು.

ಸಂಡೂರಿನ ಜನ ಯಾವತ್ತೂ ಕಾಂಗ್ರೆಸ್‌ ಕೈ ಬಿಟ್ಟಿಲ್ಲ. ನಮ್ಮ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿಗಳು, ಮಹಿಳೆಯೊಬ್ಬರಿಗೆ ಅವಕಾಶ ಮಾಡಿಕೊಟ್ಟಿದ್ದು, ಒಗ್ಗಟಿನ ಹೋರಾಟ ನಮ್ಮ ಗೆಲುವಿಗೆ ಕಾರಣವಾಗಿದೆ’ ಎಂದರು.
ನನ್ನ ಕ್ಷೇತ್ರದ ಜನ ನನಗೆ ನೀಡಿರುವ ಕೊಡುಗೆಯನ್ನು ನನ್ನ ಸೇವೆಯ ಮೂಲಕ ಮತ್ತೆ ಹಿಂದಿರುಗಿಸುವೆ. ಸಂಡೂರು ಕಾಂಗ್ರೆಸ್‌ ಭದ್ರಕೋಟೆ. ಅದನ್ನು ಭದ್ರಪಡಿಸುವ ಕೆಲಸ ಮಾಡುವುದಾಗಿ ಹೇಳಿದ್ದೆ. ಅದರಂತೆ ನಡೆದುಕೊಳ್ಳುವೆ ಎಂದು ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಶೇ. 49ರಷ್ಟು ಮತ ಸಿಕ್ಕಿತ್ತು. ಈಗ ಶೇ. 51 ಮತ ಸಿಕ್ಕಿದೆ. ಅದರಂತೆ ನೋಡಿದರೆ ನಮ್ಮ ಮತ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಬಳ್ಳಾರಿ ಮತ್ತು ಸಂಡೂರಿನ ಜನ ತುಕಾರಾಂ ಅವರನ್ನು ಸಂಸತ್‌ಗೆ, ನನ್ನನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ್ದಾರೆ. ವೈವಾಹಿಕ ಜೀನದಲ್ಲಿ ಪರಸ್ಪರ ಸಹಕಾರದೊಂದಿಗೆ ಬಾಳ್ವೆ ನಡೆಸಿದ ನಾವು, ರಾಜಕೀಯದಲ್ಲೂ ಪರಸ್ಪರ ಸಹಕರಿಸುತ್ತಲೇ ಕೆಲಸ ಮಾಡುತ್ತೇವೆ ಎಂದು ಅನ್ನಪೂರ್ಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಲೂಕಿನ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಅಡಿಗಲ್ಲು ಹಾಕಿದ್ದಾರೆ. ಸಂಡೂರು ಬಸ್‌ ನಿಲ್ದಾಣಕ್ಕೂ ಭೂಮಿ ಪೂಜೆ ಆಗಿದೆ. ಅದನ್ನು ಬೇಗ ಪೂರ್ಣಗೊಳಿಸುವೆ. ಅವುಗಳನ್ನು ಆದ್ಯತೆಯಾಗಿ ಪರಿಗಣಿಸುವೆ’ ಎಂದು ಇದೇ ವೇಳೆ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು