2:15 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಗೆಲುವಿನಿಂದ ಜವಾಬ್ದಾರಿ ಹೆಚ್ಚಿದೆ, ಜನರ ನಿರೀಕ್ಷೆ ಈಡೇರಿಸುವೆ: ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ

23/11/2024, 17:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಿನ ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್‌ಗೆ ಮತ್ತೆ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನರ ನಿರೀಕ್ಷೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವುದೆ. ಅದಕ್ಕಾಗಿ ಇಂದಿನಿಂದ ದುಡಿಯುವೆ ಎಂದು ಸಂಡೂರು ಕ್ಷೇತ್ರದ ವಿಜೇತ ಕಾಂಗ್ರೆಸ್‌ ಅಭ್ಯರ್ಥಿ ಇ. ಅನ್ನಪೂರ್ಣ ಹೇಳಿದ್ದಾರೆ.
ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಮೊದಲಿಗೆ ಸಂಡೂರಿನ ಜನತೆಗೆ ಧನ್ಯವಾದ ಅರ್ಪಿಸಿದರು.

ಸಂಡೂರಿನ ಜನ ಯಾವತ್ತೂ ಕಾಂಗ್ರೆಸ್‌ ಕೈ ಬಿಟ್ಟಿಲ್ಲ. ನಮ್ಮ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿಗಳು, ಮಹಿಳೆಯೊಬ್ಬರಿಗೆ ಅವಕಾಶ ಮಾಡಿಕೊಟ್ಟಿದ್ದು, ಒಗ್ಗಟಿನ ಹೋರಾಟ ನಮ್ಮ ಗೆಲುವಿಗೆ ಕಾರಣವಾಗಿದೆ’ ಎಂದರು.
ನನ್ನ ಕ್ಷೇತ್ರದ ಜನ ನನಗೆ ನೀಡಿರುವ ಕೊಡುಗೆಯನ್ನು ನನ್ನ ಸೇವೆಯ ಮೂಲಕ ಮತ್ತೆ ಹಿಂದಿರುಗಿಸುವೆ. ಸಂಡೂರು ಕಾಂಗ್ರೆಸ್‌ ಭದ್ರಕೋಟೆ. ಅದನ್ನು ಭದ್ರಪಡಿಸುವ ಕೆಲಸ ಮಾಡುವುದಾಗಿ ಹೇಳಿದ್ದೆ. ಅದರಂತೆ ನಡೆದುಕೊಳ್ಳುವೆ ಎಂದು ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಶೇ. 49ರಷ್ಟು ಮತ ಸಿಕ್ಕಿತ್ತು. ಈಗ ಶೇ. 51 ಮತ ಸಿಕ್ಕಿದೆ. ಅದರಂತೆ ನೋಡಿದರೆ ನಮ್ಮ ಮತ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಬಳ್ಳಾರಿ ಮತ್ತು ಸಂಡೂರಿನ ಜನ ತುಕಾರಾಂ ಅವರನ್ನು ಸಂಸತ್‌ಗೆ, ನನ್ನನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ್ದಾರೆ. ವೈವಾಹಿಕ ಜೀನದಲ್ಲಿ ಪರಸ್ಪರ ಸಹಕಾರದೊಂದಿಗೆ ಬಾಳ್ವೆ ನಡೆಸಿದ ನಾವು, ರಾಜಕೀಯದಲ್ಲೂ ಪರಸ್ಪರ ಸಹಕರಿಸುತ್ತಲೇ ಕೆಲಸ ಮಾಡುತ್ತೇವೆ ಎಂದು ಅನ್ನಪೂರ್ಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಲೂಕಿನ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಅಡಿಗಲ್ಲು ಹಾಕಿದ್ದಾರೆ. ಸಂಡೂರು ಬಸ್‌ ನಿಲ್ದಾಣಕ್ಕೂ ಭೂಮಿ ಪೂಜೆ ಆಗಿದೆ. ಅದನ್ನು ಬೇಗ ಪೂರ್ಣಗೊಳಿಸುವೆ. ಅವುಗಳನ್ನು ಆದ್ಯತೆಯಾಗಿ ಪರಿಗಣಿಸುವೆ’ ಎಂದು ಇದೇ ವೇಳೆ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು