12:47 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ಗೆಲುವಿನಿಂದ ಜವಾಬ್ದಾರಿ ಹೆಚ್ಚಿದೆ, ಜನರ ನಿರೀಕ್ಷೆ ಈಡೇರಿಸುವೆ: ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ

23/11/2024, 17:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಿನ ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್‌ಗೆ ಮತ್ತೆ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನರ ನಿರೀಕ್ಷೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವುದೆ. ಅದಕ್ಕಾಗಿ ಇಂದಿನಿಂದ ದುಡಿಯುವೆ ಎಂದು ಸಂಡೂರು ಕ್ಷೇತ್ರದ ವಿಜೇತ ಕಾಂಗ್ರೆಸ್‌ ಅಭ್ಯರ್ಥಿ ಇ. ಅನ್ನಪೂರ್ಣ ಹೇಳಿದ್ದಾರೆ.
ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಮೊದಲಿಗೆ ಸಂಡೂರಿನ ಜನತೆಗೆ ಧನ್ಯವಾದ ಅರ್ಪಿಸಿದರು.

ಸಂಡೂರಿನ ಜನ ಯಾವತ್ತೂ ಕಾಂಗ್ರೆಸ್‌ ಕೈ ಬಿಟ್ಟಿಲ್ಲ. ನಮ್ಮ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿಗಳು, ಮಹಿಳೆಯೊಬ್ಬರಿಗೆ ಅವಕಾಶ ಮಾಡಿಕೊಟ್ಟಿದ್ದು, ಒಗ್ಗಟಿನ ಹೋರಾಟ ನಮ್ಮ ಗೆಲುವಿಗೆ ಕಾರಣವಾಗಿದೆ’ ಎಂದರು.
ನನ್ನ ಕ್ಷೇತ್ರದ ಜನ ನನಗೆ ನೀಡಿರುವ ಕೊಡುಗೆಯನ್ನು ನನ್ನ ಸೇವೆಯ ಮೂಲಕ ಮತ್ತೆ ಹಿಂದಿರುಗಿಸುವೆ. ಸಂಡೂರು ಕಾಂಗ್ರೆಸ್‌ ಭದ್ರಕೋಟೆ. ಅದನ್ನು ಭದ್ರಪಡಿಸುವ ಕೆಲಸ ಮಾಡುವುದಾಗಿ ಹೇಳಿದ್ದೆ. ಅದರಂತೆ ನಡೆದುಕೊಳ್ಳುವೆ ಎಂದು ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಶೇ. 49ರಷ್ಟು ಮತ ಸಿಕ್ಕಿತ್ತು. ಈಗ ಶೇ. 51 ಮತ ಸಿಕ್ಕಿದೆ. ಅದರಂತೆ ನೋಡಿದರೆ ನಮ್ಮ ಮತ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಬಳ್ಳಾರಿ ಮತ್ತು ಸಂಡೂರಿನ ಜನ ತುಕಾರಾಂ ಅವರನ್ನು ಸಂಸತ್‌ಗೆ, ನನ್ನನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ್ದಾರೆ. ವೈವಾಹಿಕ ಜೀನದಲ್ಲಿ ಪರಸ್ಪರ ಸಹಕಾರದೊಂದಿಗೆ ಬಾಳ್ವೆ ನಡೆಸಿದ ನಾವು, ರಾಜಕೀಯದಲ್ಲೂ ಪರಸ್ಪರ ಸಹಕರಿಸುತ್ತಲೇ ಕೆಲಸ ಮಾಡುತ್ತೇವೆ ಎಂದು ಅನ್ನಪೂರ್ಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಲೂಕಿನ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಅಡಿಗಲ್ಲು ಹಾಕಿದ್ದಾರೆ. ಸಂಡೂರು ಬಸ್‌ ನಿಲ್ದಾಣಕ್ಕೂ ಭೂಮಿ ಪೂಜೆ ಆಗಿದೆ. ಅದನ್ನು ಬೇಗ ಪೂರ್ಣಗೊಳಿಸುವೆ. ಅವುಗಳನ್ನು ಆದ್ಯತೆಯಾಗಿ ಪರಿಗಣಿಸುವೆ’ ಎಂದು ಇದೇ ವೇಳೆ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು