2:56 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸ್ಥಳೀಯಾಡಳಿತ ವಿಫಲ: ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ

23/11/2024, 19:22

ಮಂಗಳೂರು(reporterkarnataka.com): ಮಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎನ್‌ಐಟಿಕೆಯ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಮಿತಿಯಿಂದ ವರದಿ ತರಿಸಿ ಕ್ರಮ ಕೈಗೊಳ್ಳಲು ಕಳೆದೆರಡು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಏನೂ ಪ್ರಯೋಜನವಾಗಿಲ್ಲ ಎಂದು ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹಲವು ರಸ್ತೆಗಳಲ್ಲಿ ಅಗೆದು ಹಾಕಲಾಗಿದೆ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಡಿಸೆಂಬರ್ ಒಳಗೆ ರಸ್ತೆಗುಂಡಿಗಳಿಗೆ ಪ್ಯಾಚ್‌ವರ್ಕ್ ಕೆಲಸ ಮುಗಿಸಬೇಕು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಸಭೆ ಕರೆಯಬೇಕು ಎಂದು ಅವರು ಆಗ್ರಹಿಸಿದರು.
ಮನಪಾದಲ್ಲಿ ಬಿಜೆಪಿ ಆಡಳಿತದಲ್ಲಿ ಜಲಸಿರಿ ಕಾಮಗಾರಿ, ಗೇಲ್‌ಗ್ಯಾಸ, ಸ್ಮಾರ್ಟ್ ಸಿಟಿ, ಪ್ರೀಮಿಯಂ ಎಫೇರ್‌ನ ಅವ್ಯವಸ್ಥಿತ ಕಾಮಗಾರಿಗಳಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ನುಡಿದರು.
ಕಾಂಗ್ರೆಸ್ ಮುಖಂಡರಾದ ಶಬ್ಬೀರ್, ಹೇಮಂತ್ ಗರೋಡಿ, ಸಲೀಂ, ದುರ್ಗಾ ಪ್ರಸಾದ್, ಇಮ್ರಾನ್, ಹಬೀಬ್ ಕಣ್ಣೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು