12:24 PM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಮಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸ್ಥಳೀಯಾಡಳಿತ ವಿಫಲ: ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ

23/11/2024, 19:22

ಮಂಗಳೂರು(reporterkarnataka.com): ಮಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎನ್‌ಐಟಿಕೆಯ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಮಿತಿಯಿಂದ ವರದಿ ತರಿಸಿ ಕ್ರಮ ಕೈಗೊಳ್ಳಲು ಕಳೆದೆರಡು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಏನೂ ಪ್ರಯೋಜನವಾಗಿಲ್ಲ ಎಂದು ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹಲವು ರಸ್ತೆಗಳಲ್ಲಿ ಅಗೆದು ಹಾಕಲಾಗಿದೆ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಡಿಸೆಂಬರ್ ಒಳಗೆ ರಸ್ತೆಗುಂಡಿಗಳಿಗೆ ಪ್ಯಾಚ್‌ವರ್ಕ್ ಕೆಲಸ ಮುಗಿಸಬೇಕು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಸಭೆ ಕರೆಯಬೇಕು ಎಂದು ಅವರು ಆಗ್ರಹಿಸಿದರು.
ಮನಪಾದಲ್ಲಿ ಬಿಜೆಪಿ ಆಡಳಿತದಲ್ಲಿ ಜಲಸಿರಿ ಕಾಮಗಾರಿ, ಗೇಲ್‌ಗ್ಯಾಸ, ಸ್ಮಾರ್ಟ್ ಸಿಟಿ, ಪ್ರೀಮಿಯಂ ಎಫೇರ್‌ನ ಅವ್ಯವಸ್ಥಿತ ಕಾಮಗಾರಿಗಳಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ನುಡಿದರು.
ಕಾಂಗ್ರೆಸ್ ಮುಖಂಡರಾದ ಶಬ್ಬೀರ್, ಹೇಮಂತ್ ಗರೋಡಿ, ಸಲೀಂ, ದುರ್ಗಾ ಪ್ರಸಾದ್, ಇಮ್ರಾನ್, ಹಬೀಬ್ ಕಣ್ಣೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು