3:27 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸ್ಥಳೀಯಾಡಳಿತ ವಿಫಲ: ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ

23/11/2024, 19:22

ಮಂಗಳೂರು(reporterkarnataka.com): ಮಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಎನ್‌ಐಟಿಕೆಯ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಮಿತಿಯಿಂದ ವರದಿ ತರಿಸಿ ಕ್ರಮ ಕೈಗೊಳ್ಳಲು ಕಳೆದೆರಡು ವರ್ಷಗಳಿಂದ ಒತ್ತಾಯಿಸುತ್ತಿದ್ದರೂ ಏನೂ ಪ್ರಯೋಜನವಾಗಿಲ್ಲ ಎಂದು ಮಾಜಿ ಮೇಯರ್ ಶಶಿಧರ ಹೆಗ್ಡೆ ವಿಷಾದ ವ್ಯಕ್ತಪಡಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹಲವು ರಸ್ತೆಗಳಲ್ಲಿ ಅಗೆದು ಹಾಕಲಾಗಿದೆ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.
ಡಿಸೆಂಬರ್ ಒಳಗೆ ರಸ್ತೆಗುಂಡಿಗಳಿಗೆ ಪ್ಯಾಚ್‌ವರ್ಕ್ ಕೆಲಸ ಮುಗಿಸಬೇಕು. ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಸಭೆ ಕರೆಯಬೇಕು ಎಂದು ಅವರು ಆಗ್ರಹಿಸಿದರು.
ಮನಪಾದಲ್ಲಿ ಬಿಜೆಪಿ ಆಡಳಿತದಲ್ಲಿ ಜಲಸಿರಿ ಕಾಮಗಾರಿ, ಗೇಲ್‌ಗ್ಯಾಸ, ಸ್ಮಾರ್ಟ್ ಸಿಟಿ, ಪ್ರೀಮಿಯಂ ಎಫೇರ್‌ನ ಅವ್ಯವಸ್ಥಿತ ಕಾಮಗಾರಿಗಳಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ನುಡಿದರು.
ಕಾಂಗ್ರೆಸ್ ಮುಖಂಡರಾದ ಶಬ್ಬೀರ್, ಹೇಮಂತ್ ಗರೋಡಿ, ಸಲೀಂ, ದುರ್ಗಾ ಪ್ರಸಾದ್, ಇಮ್ರಾನ್, ಹಬೀಬ್ ಕಣ್ಣೂರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು