2:14 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಉಪ ಚುನಾವಣೆಯಲ್ಲಿ ಆಡಳಿತರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಸಾಮಾನ್ಯ: ಪ್ರತಿಪಕ್ಷದ ನಾಯಕ ಆರ್. ಅಶೋಕ್

23/11/2024, 19:29

ಬೆಂಗಳೂರು(reporterkarnataka.com): ಉಪ ಚುನಾವಣೆಗಳಲ್ಲಿ ಆಡಳಿತರೂಢ ಪಕ್ಷ ಗೆಲ್ಲುವುದು ಸಾಮಾನ್ಯವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಅವರು ಗೆದ್ದಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದು ನಮ್ಮ ಹಿನ್ನಡೆಗೆ ಕಾರಣವಾಗಿದೆ. ಚನ್ನಪಟ್ಟಣ ದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವುದಿಲ್ಲ ಅಂತ ಹೇಳುತ್ತಲೇ ಬಂದಿದ್ದರು. ಆದರೆ ಹೈಕಮಾಂಡ್ ಸೂಚನೆಯಂತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರ ಅದೃಷ್ಟ ಚೆನ್ನಾಗಿಲ್ಲ. ಎರಡು ಬಾರಿ ಸೋತಿದ್ದಾರೆ. ಇಲ್ಲಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಗೆಲ್ಲಲಿಲ್ಲ ಎಂದರು.
ನಮಗೆ ಎರಡು ಕ್ಷೇತ್ರ ಗೆಲ್ಲುವ ವಿಶ್ವಾಸವಿತ್ತು. ಆದರೆ ಮತದಾರರು ನಾನಾ ಕಾರಣಗಳಿಗಾಗಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಕೂಡ ಭರತ್ ಬೊಮ್ಮಾಯಿ ಅವರನ್ನು ನಿಲ್ಲಿಸಲು ಬಸವರಾಜ ಬೊಮ್ಮಾಯಿ ಅವರಿಗೆ ಮನಸ್ಸಿರಲಿಲ್ಲ. ನನ್ನಲ್ಲೇ ಈ ವಿಚಾರವನ್ನು ಹೇಳಿದ್ದರು. ಆದರೆ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಒಪ್ಪಿಕೊಂಡಿದ್ದರು ಎಂದು ಅಶೋಕ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು