7:17 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉಪ ಚುನಾವಣೆಯಲ್ಲಿ ಆಡಳಿತರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಸಾಮಾನ್ಯ: ಪ್ರತಿಪಕ್ಷದ ನಾಯಕ ಆರ್. ಅಶೋಕ್

23/11/2024, 19:29

ಬೆಂಗಳೂರು(reporterkarnataka.com): ಉಪ ಚುನಾವಣೆಗಳಲ್ಲಿ ಆಡಳಿತರೂಢ ಪಕ್ಷ ಗೆಲ್ಲುವುದು ಸಾಮಾನ್ಯವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಅವರು ಗೆದ್ದಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದು ನಮ್ಮ ಹಿನ್ನಡೆಗೆ ಕಾರಣವಾಗಿದೆ. ಚನ್ನಪಟ್ಟಣ ದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವುದಿಲ್ಲ ಅಂತ ಹೇಳುತ್ತಲೇ ಬಂದಿದ್ದರು. ಆದರೆ ಹೈಕಮಾಂಡ್ ಸೂಚನೆಯಂತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರ ಅದೃಷ್ಟ ಚೆನ್ನಾಗಿಲ್ಲ. ಎರಡು ಬಾರಿ ಸೋತಿದ್ದಾರೆ. ಇಲ್ಲಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಗೆಲ್ಲಲಿಲ್ಲ ಎಂದರು.
ನಮಗೆ ಎರಡು ಕ್ಷೇತ್ರ ಗೆಲ್ಲುವ ವಿಶ್ವಾಸವಿತ್ತು. ಆದರೆ ಮತದಾರರು ನಾನಾ ಕಾರಣಗಳಿಗಾಗಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಕೂಡ ಭರತ್ ಬೊಮ್ಮಾಯಿ ಅವರನ್ನು ನಿಲ್ಲಿಸಲು ಬಸವರಾಜ ಬೊಮ್ಮಾಯಿ ಅವರಿಗೆ ಮನಸ್ಸಿರಲಿಲ್ಲ. ನನ್ನಲ್ಲೇ ಈ ವಿಚಾರವನ್ನು ಹೇಳಿದ್ದರು. ಆದರೆ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಒಪ್ಪಿಕೊಂಡಿದ್ದರು ಎಂದು ಅಶೋಕ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು