1:01 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಜ್ಞಾನ ಸ್ಪರ್ಧೆಯಿಂದ ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಸಲು ಸಾಧ್ಯ: ಎಸ್. ಎನ್. ಸುಬ್ರಮಣ್ಯಂ

24/11/2024, 21:40

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ವಿದ್ಯಾರ್ಥಿಗಳಲ್ಲಿ ವೖಜ್ಞಾನಿಕ ಮನೋಭಾವ, ಮಾನವೀಯತೆ, ವೖಚಾರಿಕ ಮನೋಧರ್ಮ ಮತ್ತು ಸುಧಾರಣೆಯನ್ನು ತರಲು ವಿಜ್ಞಾನ ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ನಿವೃತ್ತ ಕಂದಾಯ ಅಧಿಕಾರಿ ಎಸ್. ಎನ್. ಸುಬ್ರಮಣ್ಯಂ ಹೇಳಿದರು.
ಶ್ರೀನಿವಾಸಪುರ ತಾಲೂಕಿನ ಯಲ್ಡೂರುಗ್ರಾಮದ ನ್ಯಾಷನಲ್ ಹೖಸ್ಕೂಲಿನಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಂತರ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಜ್ಞಾನ ವಿಷಯಗಳ ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಾ, ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ವಿಜ್ಞಾನದ ಬಳಕೆಯಾಗುತ್ತಿದೆ.

ಮಕ್ಕಳಿಗೆ ಈಗನಿಂದಲೇ ವಿಜ್ಞಾನದ ಮೇಲೆ ಆಸಕ್ತಿ ಮೂಡಿಸುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜ್ಙಾನಾದ್ರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಟಿ. ವಿ. ಮಲ್ಲಿಕಾರ್ಜುನರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ವಿಜ್ಞಾನ ಮತ್ತು ಅದರ ಉಪಯೋಗವನ್ನು ಅರಿತು ಜೀವನ ನಡೆಸಿದರೆ ಅದು ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.
ಶಾಲಾ ನಿರ್ವಹಣಾ ಸಮಿತಿಯ ಸದಸ್ಯರಾದ ಕೆ. ಟಿ. ಜಯಣ್ಣ, ಎನ್. ಹರಿಕುಮಾರ್, ರಮೇಶ್ ಬಾಬು, ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ದೇವೇಗೌಡ, ನಿವೃತ್ತ ಮುಖ್ಯ ಶಿಕ್ಷಕರಾದ ಕೆ. ಪ್ರಕಾಶಯ್ಯ, ಕೆ. ಪಿ. ಕೃಷ್ಣಪ್ಪ, ನಿವೃತ್ತ ಶಿಕ್ಷಕರಾದ ಎನ್. ಹರಿಕುಮಾರ್, ಡಿ. ವಿ. ಸಿದ್ದಾರೆಡ್ಡಿ, ಸಿ ಆರ್. ಪಿ ಸುಜಾತ, ಗಂಗೋತ್ರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಲ್. ಸುಬ್ರಮಣಿ, ಯಲ್ದೂರು ಹೋಬಳಿ ಕರವೇ ಪ್ರಧಾನ ಕಾರ್ಯದರ್ಶಿ ಎಲ್. ಮುರಳಿಮೋಹನ್, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಜಿ. ಕೆ. ಮುರಳಿ, ಸಮಾಜ ಸೇವಕ ಅಂಬರೀಶ್, ಬ್ರಿಲಿಯಂಟ್ ಪಬ್ಲಿಕ್ ಶಾಲೆಯ ಅಪ್ಸರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು