7:29 PM Thursday16 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು

ಇತ್ತೀಚಿನ ಸುದ್ದಿ

ಹೆವಿ ವೆಹಿಕಲ್ ಡೈವಿಂಗ್, ಡ್ರೋನ್ ಚಾಲನ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್: ಅಲ್ಪಸಂಖ್ಯಾತರ ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

25/11/2024, 13:52

ಮಂಗಳೂರು(reporterkarnataka.com): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್, ಮುಸ್ಲಿಂ, ಪಾರ್ಸಿ ಸಿಖ್ ಜನಾಂಗದ 2024-25ನೇ ಸಾಲಿಗೆ ನಿಗಮವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್‍ಸಿ, ಬಿಪಿಒಗಳು ಮತ್ತು ಇತರ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್ ಡೈವಿಂಗ್, ಡ್ರೋನ್ ಚಾಲನ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್ ಮತ್ತು ಮಹಿಳೆಯರಿಗೆ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಗಳು: ಅರ್ಜಿದಾರರು ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. 18 ರಿಂದ 45 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷಗಿಂತ ಕಡಿಮೆಯಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು. ಕನಿಷ್ಟ ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಗಳಲ್ಲಿ ತರಬೇತಿ ಪಡೆದಿರಬಾರದು.
ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಮೌಲಾನಾ ಅಜಾದ್ ಭವನ 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ತಾಲೂಕು-575001 ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ :- 0824-2951644 ಅಥವಾ ಸಹಾಯವಾಣಿ ಸಂಖ್ಯೆ:8277799990 ಸಂಪರ್ಕಿಸಬಹುದು. ಅಥವಾ 1)ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಕೆಳಗಿನ ಮಹಡಿ, ಭಾರತ್ ಕಮರ್ಶಿಯಲ್ ಕಾಂಪ್ಲೆಕ್ಸ್, ಬಿ.ಸಿ.ರೋಡು ಬಂಟ್ವಾಳ ದೂರವಾಣಿ ಸಂಖ್ಯೆ : 08255-232470. 2) ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣ ಕಟ್ಟಡ, ತಾಲೂಕು ಪಂಚಾಯತ್ ಹತ್ತಿರ ಬೆಳ್ತಂಗಡಿ ದೂರವಾಣಿ ಸಂಖ್ಯೆ :- 08256-295335 3) ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯತ್ ಸಾಮಥ್ರ್ಯ ಸೌಧ ಕಟ್ಟಡ, ಪುತ್ತೂರು ತಾಲೂಕು ದೂರವಾಣಿ ಸಂಖ್ಯೆ:08251-237078. 4) ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯತ್ ಕಟ್ಟಡ, ಸುಳ್ಯ ದೂರವಾಣಿ ಸಂಖ್ಯೆ 08257- 230666, ಸಂಪರ್ಕಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು