7:13 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ

25/11/2024, 16:11

ಪರ್ತ್(reporterkarnataka.com): ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದೆ.
ಪರ್ತ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 295 ರನ್​ಗಳಿಂದ ಗೆಲುವು ಕಂಡಿದೆ.
ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 150 ರನ್​ಗಳಿಸಿತು. ಆದರೆ ಬೌಲಿಂಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಕಾಂಗರೂ ಪಡೆಯನ್ನು 104 ರನ್​ಗಳಿಗೆ ಕಟ್ಟಿ ಹಾಕಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ ಬಾಟ್ಸ್ ಮೆನ್ ಗಳು ಭಾರೀ ರೈನ್ ಬಾರಿದರು.
ಜೈಸ್ವಾಲ್​ (161), ಕೆ.ಎಲ್.ರಾಹುಲ್​ (77) ರನ್​ ಗಳಿಸಿದರು. ಬಳಿಕ ವಿರಾಟ್​ ಕೊಹ್ಲಿ ಶತಕ ಸಿಡಿಸುತ್ತಿದ್ದಂತೆ ಭಾರತ 487/6 ರನ್‌ಗಳಿಗೆ ಡಿಕ್ಲೇರ್​ ಮಾಡಿಕೊಂಡಿತ್ತು. ಇದರೊಂದಿಗೆ ಭಾರತ 534 ರನ್‌ಗಳ ಬೃಹತ್​ ಗುರಿ ನೀಡಿತು. ಆಸೀಸ್​ ಪಡೆ 17 ರನ್​ಗಳಿಗೆ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡಿತು. ಆರಂಭಿಕ​ ಬ್ಯಾಟ್ಸ್ ಮೆನ್ ಮೆಕ್​ಸ್ವೀನಿ ಶೂನ್ಯಕ್ಕೆ ನಿರ್ಗಮಿಸಿದರೆ, ಪ್ಯಾಟ್​ ಕಮಿನ್ಸ್​ 2, ಲಬೋಶ್ಚಗೇನೆ 3 ರನ್‌ಗಳಿಗೆ ನಿರ್ಗಮಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ 3ನೇ ದಿನದಾಟಕ್ಕೆ 12 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡಿತು. ನಾಲ್ಕನೇ ದಿನ ಕೂಡಾ ಬ್ಯಾಟಿಂಗ್​ ವೈಫಲ್ಯ ಅನುಭವಿಸಿದ ಕಾಂಗರೂ ಪಡೆ ಉಳಿದ 7 ವಿಕೆಟ್​ಗಳನ್ನು ಕಳೆದುಕೊಂಡು ಹೀನಾಯ ಪರಾಭವ ಕಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು