8:13 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಜಯ

25/11/2024, 16:11

ಪರ್ತ್(reporterkarnataka.com): ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದೆ.
ಪರ್ತ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 295 ರನ್​ಗಳಿಂದ ಗೆಲುವು ಕಂಡಿದೆ.
ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 150 ರನ್​ಗಳಿಸಿತು. ಆದರೆ ಬೌಲಿಂಗ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಕಾಂಗರೂ ಪಡೆಯನ್ನು 104 ರನ್​ಗಳಿಗೆ ಕಟ್ಟಿ ಹಾಕಿ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ ಬಾಟ್ಸ್ ಮೆನ್ ಗಳು ಭಾರೀ ರೈನ್ ಬಾರಿದರು.
ಜೈಸ್ವಾಲ್​ (161), ಕೆ.ಎಲ್.ರಾಹುಲ್​ (77) ರನ್​ ಗಳಿಸಿದರು. ಬಳಿಕ ವಿರಾಟ್​ ಕೊಹ್ಲಿ ಶತಕ ಸಿಡಿಸುತ್ತಿದ್ದಂತೆ ಭಾರತ 487/6 ರನ್‌ಗಳಿಗೆ ಡಿಕ್ಲೇರ್​ ಮಾಡಿಕೊಂಡಿತ್ತು. ಇದರೊಂದಿಗೆ ಭಾರತ 534 ರನ್‌ಗಳ ಬೃಹತ್​ ಗುರಿ ನೀಡಿತು. ಆಸೀಸ್​ ಪಡೆ 17 ರನ್​ಗಳಿಗೆ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡಿತು. ಆರಂಭಿಕ​ ಬ್ಯಾಟ್ಸ್ ಮೆನ್ ಮೆಕ್​ಸ್ವೀನಿ ಶೂನ್ಯಕ್ಕೆ ನಿರ್ಗಮಿಸಿದರೆ, ಪ್ಯಾಟ್​ ಕಮಿನ್ಸ್​ 2, ಲಬೋಶ್ಚಗೇನೆ 3 ರನ್‌ಗಳಿಗೆ ನಿರ್ಗಮಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ 3ನೇ ದಿನದಾಟಕ್ಕೆ 12 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡಿತು. ನಾಲ್ಕನೇ ದಿನ ಕೂಡಾ ಬ್ಯಾಟಿಂಗ್​ ವೈಫಲ್ಯ ಅನುಭವಿಸಿದ ಕಾಂಗರೂ ಪಡೆ ಉಳಿದ 7 ವಿಕೆಟ್​ಗಳನ್ನು ಕಳೆದುಕೊಂಡು ಹೀನಾಯ ಪರಾಭವ ಕಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು