3:43 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಲಬುರ್ಗಿ: ವಕ್ಫ್ ಬೋರ್ಡ್ ಸದಸ್ಯರಾಗಿ ಆಯ್ಕೆಯಾದ ಹಫೀಜ್ ಮುಹಮ್ಮದ್ ಅಲಿ ಅಲ್ ಹುಸೇನಿಗೆ ಅದ್ಧೂರಿ ಸ್ವಾಗತ

25/11/2024, 19:09

ಶಿವು ರಾಠೋಡ್ ಹುಣಸಗಿ ಕಲಬುರ್ಗಿ

info.reporterkarnataka@gmail.com

ವಕ್ಫ್ ಬೋರ್ಡ್ ಸದಸ್ಯರಾಗಿ ನೂತನವಾಗಿ ಆಯ್ಕೆಯದ ಕೆಬಿಎನ್ ದರ್ಗಾದ ಸಜ್ಜಾದೆ ನಶೀನ ಹಫೀಜ ಸಯ್ಯದ ಮುಹಮ್ಮದ್ ಅಲಿ ಅಲ್ ಹುಸ್ಸೇನಿ ಅವರನ್ನು ಕಲಬುರ್ಗಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ನಗರದ ಹುಮ್ನಾಬಾದ್ ರಿಂಗ್ ರೋಡ್ ನಲ್ಲಿ ಹೂವುಗಳಿಂದ ತುಂಬಿದ ಜೇಸಿಬಿಗಳಿಂದ ಅಲಿ ಹುಸೇನಿರಿಗೆ ಪುಷ್ಪಾರ್ಪಣೆ ನಡೆಯಿತು. ಅಲ್ಲದೇ 600 ಕೆಜಿ ಹಾಗೂ 50 ಮೀಟರ ಉದ್ದದ ಮಾಲಾರ್ಪಣೆಗೆ ನೆರೆದ ಸಮೂಹ ಸಾಕ್ಷಿಯಾಯಿತು.
ಹೂ ಮಳೆಯ ನಂತರ ಕಪನೂರ ಏರಿಯಾದ ಬಾಬಾಸಾಹೇಬ ಅಂಬೇಡ್ಕರ ಮೂರ್ತಿಗೆ ಅಲಿ ಅಲ ಹುಸ್ಸೇನಿ ಮಾಲಾರ್ಪಣೆ ಮಾಡಿದರು.

ಪುಂಜಾ ಗ್ರೂಪ್ ಆಫ್ ಇಂಡಸ್ಟ್ರಿ (ಕರಿಗಾರ ಕುಟುಂಬ),ದರ್ಗಾ ಹಜರತ್ ಬೈ ಬಿ ಕುಂಜಾ ಮಸಾಬಿ ದರ್ಗಾ, ಅಯಾಜ್ ಖಾನ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ನಯೀಮ್ ಖಾನ ಸೇರಿದಂತೆ ಅನೇಕ ಜನ ಅವರಿಗೆ ರೋಡ ಶೋ ರ್ಯಾಲಿಯಲ್ಲಿಯೇ ಸನ್ಮಾನ ಮಾಡಿ ಅಭಿನಂದಿಸಿದರು. ರೋಡ ಶೋ ಉದ್ದಕ್ಕೂ “ಅಲಿ ಹಮಾರಿ ಜಾನ್ ಹೈ, ಗುಲ್ಬರ್ಗಾ ಕಿ ಶಾನ ಹೈ ” ಎಂಬ ಜೈಕಾರ ಕೇಳಿ ಬಂತು.
ಹಫೀಜ ಮುಹಮ್ಮದ ಅಲಿ ಅಲ್ ಹುಸ್ಸೇನಿ ಇವರು ಜನರನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಸಹಸ್ರಾರು ಜನರು ಪಾಲ್ಗೊಂಡಿದ್ದ ಈ ರ್ಯಾಲಿ ಕಮಲಾಪುರದಿಂದ ಪ್ರಾರಂಭವಾಗಿ ಕಪ್ನೂರ್,ಹುಮನಾಬಾದ್ ಸರ್ಕಲ್, ನಾಗೇಶ್ವರ ಶಾಲೆ, ಮುಸ್ಲಿಂ ಚೌಕ್, ಮಕ್ಬಾರಾ ಮಸೀದಿ, ಜಲಾಲವಾಡಿ, ಕೆಬಿಎನ್ ದರ್ಗಾ. ದರ್ಗಾ ತಲುಪಿದ ನಂತರ ಖಾಜಾ ಬಂದಾನವಾಜರ ಆಶೀರ್ವಾದ ಪಡೆದ ಅಲಿ ಅಲ್ ಹುಸ್ಸೇನಿ ದೇವಡಿ ತೆರಳಿದರು. ದೇವಡಿಯಲ್ಲಿ ಭಕ್ತರು ಅನುಯಾಯಿಗಳು ಸನ್ಮಾನ ಮಾಡಿದರು. ಶಾಂತಿಯುತವಾಗಿ ನಡೆದ ರ್ಯಾಲಿಯಲ್ಲಿ ಪೊಲೀಸ್
ಬಿಗಿ ಬಂದೋಬಸ್ತ್ ಮಾಡಲಾಗಿತು.

ಇತ್ತೀಚಿನ ಸುದ್ದಿ

ಜಾಹೀರಾತು