8:16 AM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಕಲಬುರ್ಗಿ: ವಕ್ಫ್ ಬೋರ್ಡ್ ಸದಸ್ಯರಾಗಿ ಆಯ್ಕೆಯಾದ ಹಫೀಜ್ ಮುಹಮ್ಮದ್ ಅಲಿ ಅಲ್ ಹುಸೇನಿಗೆ ಅದ್ಧೂರಿ ಸ್ವಾಗತ

25/11/2024, 19:09

ಶಿವು ರಾಠೋಡ್ ಹುಣಸಗಿ ಕಲಬುರ್ಗಿ

info.reporterkarnataka@gmail.com

ವಕ್ಫ್ ಬೋರ್ಡ್ ಸದಸ್ಯರಾಗಿ ನೂತನವಾಗಿ ಆಯ್ಕೆಯದ ಕೆಬಿಎನ್ ದರ್ಗಾದ ಸಜ್ಜಾದೆ ನಶೀನ ಹಫೀಜ ಸಯ್ಯದ ಮುಹಮ್ಮದ್ ಅಲಿ ಅಲ್ ಹುಸ್ಸೇನಿ ಅವರನ್ನು ಕಲಬುರ್ಗಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ನಗರದ ಹುಮ್ನಾಬಾದ್ ರಿಂಗ್ ರೋಡ್ ನಲ್ಲಿ ಹೂವುಗಳಿಂದ ತುಂಬಿದ ಜೇಸಿಬಿಗಳಿಂದ ಅಲಿ ಹುಸೇನಿರಿಗೆ ಪುಷ್ಪಾರ್ಪಣೆ ನಡೆಯಿತು. ಅಲ್ಲದೇ 600 ಕೆಜಿ ಹಾಗೂ 50 ಮೀಟರ ಉದ್ದದ ಮಾಲಾರ್ಪಣೆಗೆ ನೆರೆದ ಸಮೂಹ ಸಾಕ್ಷಿಯಾಯಿತು.
ಹೂ ಮಳೆಯ ನಂತರ ಕಪನೂರ ಏರಿಯಾದ ಬಾಬಾಸಾಹೇಬ ಅಂಬೇಡ್ಕರ ಮೂರ್ತಿಗೆ ಅಲಿ ಅಲ ಹುಸ್ಸೇನಿ ಮಾಲಾರ್ಪಣೆ ಮಾಡಿದರು.

ಪುಂಜಾ ಗ್ರೂಪ್ ಆಫ್ ಇಂಡಸ್ಟ್ರಿ (ಕರಿಗಾರ ಕುಟುಂಬ),ದರ್ಗಾ ಹಜರತ್ ಬೈ ಬಿ ಕುಂಜಾ ಮಸಾಬಿ ದರ್ಗಾ, ಅಯಾಜ್ ಖಾನ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ನಯೀಮ್ ಖಾನ ಸೇರಿದಂತೆ ಅನೇಕ ಜನ ಅವರಿಗೆ ರೋಡ ಶೋ ರ್ಯಾಲಿಯಲ್ಲಿಯೇ ಸನ್ಮಾನ ಮಾಡಿ ಅಭಿನಂದಿಸಿದರು. ರೋಡ ಶೋ ಉದ್ದಕ್ಕೂ “ಅಲಿ ಹಮಾರಿ ಜಾನ್ ಹೈ, ಗುಲ್ಬರ್ಗಾ ಕಿ ಶಾನ ಹೈ ” ಎಂಬ ಜೈಕಾರ ಕೇಳಿ ಬಂತು.
ಹಫೀಜ ಮುಹಮ್ಮದ ಅಲಿ ಅಲ್ ಹುಸ್ಸೇನಿ ಇವರು ಜನರನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು. ಸಹಸ್ರಾರು ಜನರು ಪಾಲ್ಗೊಂಡಿದ್ದ ಈ ರ್ಯಾಲಿ ಕಮಲಾಪುರದಿಂದ ಪ್ರಾರಂಭವಾಗಿ ಕಪ್ನೂರ್,ಹುಮನಾಬಾದ್ ಸರ್ಕಲ್, ನಾಗೇಶ್ವರ ಶಾಲೆ, ಮುಸ್ಲಿಂ ಚೌಕ್, ಮಕ್ಬಾರಾ ಮಸೀದಿ, ಜಲಾಲವಾಡಿ, ಕೆಬಿಎನ್ ದರ್ಗಾ. ದರ್ಗಾ ತಲುಪಿದ ನಂತರ ಖಾಜಾ ಬಂದಾನವಾಜರ ಆಶೀರ್ವಾದ ಪಡೆದ ಅಲಿ ಅಲ್ ಹುಸ್ಸೇನಿ ದೇವಡಿ ತೆರಳಿದರು. ದೇವಡಿಯಲ್ಲಿ ಭಕ್ತರು ಅನುಯಾಯಿಗಳು ಸನ್ಮಾನ ಮಾಡಿದರು. ಶಾಂತಿಯುತವಾಗಿ ನಡೆದ ರ್ಯಾಲಿಯಲ್ಲಿ ಪೊಲೀಸ್
ಬಿಗಿ ಬಂದೋಬಸ್ತ್ ಮಾಡಲಾಗಿತು.

ಇತ್ತೀಚಿನ ಸುದ್ದಿ

ಜಾಹೀರಾತು