1:44 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮಂಗಳೂರು: ವಿಪತ್ತು ನಿರ್ವಹಣೆ ಯೋಜನೆ; ಅಮೆರಿಕ ತಂಡದಿಂದ ಭೇಟಿ

25/11/2024, 19:23

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು. ಎಸ್. ಕಾನ್ಸುಲೇಟ್ ಜನರಲ್ ಚೆನ್ನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಮೆರಿಕನ್ ಸಿಟಿಜನ್ ಸರ್ವಿಸ್ ಕಾನ್ಸೂಲ್ ಕಾರ್ಲಟನ್ ಬೆನ್‍ಸನ್ ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ವಿವರ ನೀಡಿದರು.
ವಿಪತ್ತು ಹಾಗೂ ಇತರ ಸಮಸ್ಯೆಗಳ ನಿರ್ವಹಣೆ ಬಗ್ಗೆ ಯೋಜನೆ ರೂಪಿಸಿ ನಾಗರಿಕರನ್ನು ಅವುಗಳನ್ನು ಎದುರಿಸುವ ಬಗ್ಗೆ ಯೋಜನೆ ರೂಪಿಸುವುದು ಯು.ಎಸ್. ಕಾನ್ಸುಲರ್ ಜನರಲ್ ನ ಪ್ರಮುಖ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ವಿಪತ್ತು ನಿರ್ವಹಣೆ ಯೋಜನೆಗಳ ಬಗ್ಗೆ ಅಧ್ಯಯನ ಮಾಡುವುದು ಈ ಭೇಟಿಯ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ಕಾನ್ಸುಲೇಟ್ ಜನರಲ್ ಸಹಾಯಕಿ ಚಂದ್ರಲೇಖಾ, ಜಿಲ್ಲಾ ವಿಪತ್ತು ನಿರ್ವಹಣೆ ಯೋಜನಾಧಿಕಾರಿ ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು