10:39 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯವರಿಗೆ ಸಡಗರದ ಪಲ್ಲಕ್ಕಿ ಉತ್ಸವ

26/11/2024, 11:05

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಪಲ್ಲಕ್ಕಿ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.


ನಂಜನಗೂಡು ಸ್ಥಳೀಯ ನಯನಜ ಕ್ಷತ್ರಿಯ ಜನಾಂಗದವರು ಅನೂಚಾನವಾಗಿ ಅನಾದಿಕಾಲದಿಂದಲೂ ಕಾರ್ತಿಕ ಮಾಸದ ಕಡೆ ಸೋಮವಾರದಂದು ನಡೆಸಿಕೊಂಡು ಬರುತ್ತಿರುವ ಶ್ರೀಕಂಠೇಶ್ವರ ಸ್ವಾಮಿ ಅವರ ಪಲ್ಲಕ್ಕಿ ಉತ್ಸವ ಇದಾಗಿದೆ. ಪ್ರತಿ ವರ್ಷದಂತೆ ಕಾರ್ತಿಕ ಮಾಸದ ನಾಲ್ಕನೇ ಕಡೆ ಸೋಮವಾರದಂದು ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಅಲಂಕೃತ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ಹೂವಿನ ಪಲ್ಲಕ್ಕಿಯಲ್ಲಿ ಕೂರಿಸಿ ನುರಿತ ಹಾಗೂ ಹೆಸರಾಂತ ಕಲಾವಿದರ ಮಂಗಳ ವಾದ್ಯಗೋಷ್ಠಿಗಳೊಂದಿಗೆ ಪಟ್ಟಣದ ರಥ ಬೀದಿಗಳಲ್ಲಿ ಶ್ರೀ ಯವರ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.
ಉತ್ಸವದ ವೇಳೆ ನಯನಜ ಕ್ಷತ್ರಿಯ ಹಾಗೂ ಮುಡಿಕಟ್ಟೆ ಸಂಘದ ವತಿಯಿಂದ ವಿವಿಧ ಬಗೆಯ ಪಟಾಕಿ ಹಾಗು ಬಾಣ ಬಿರುಸುಗಳನ್ನು ಸಿಡಿಸಲಾಯಿತು. ಇದರಿಂದಾಗಿ ಆಕಾಶದಲ್ಲಿ ಪಟಾಕಿ ಬಾಣ ಬಿರುಸುಗಳ ಬಣ್ಣ, ಬಣ್ಣದ ವಿವಿಧ ಬಗೆಯ ಚಿತ್ತಾರಗಳು ನೋಡುಗರ ಮನಸೂರೆಗೊಂಡವು.
ರಥ ಬೀದಿಯ ಇಕ್ಕೆಲಗಳಲ್ಲಿ ಭಕ್ತರು ಪೂಜಾ ಸಾಮಗ್ರಿಗಳೊಂದಿಗೆ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಪೂಜೆ ನೀಡುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ಪಟ್ಟಣವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಶ್ರೀಯವರ ಉತ್ಸವ ಮೂರ್ತಿಗಳನ್ನು ಕಣ್ತುಂಬಿಕೊಂಡರು.
ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ರಾಚಪ್ಪ, ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಸೋಮಣ್ಣ ಮುಖಂಡರುಗಳಾದ ವಿಷಕಂಠ, ಪ್ರಕಾಶ್, ಚಂದ್ರು ಸೇರಿದಂತೆ ಸಮಾಜದ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಮುಡಿಕಟ್ಟೆ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಸಮಾಜದ ಮುಖಂಡ ನಾಗೇಶ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು