5:59 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಾರ್ತಿಕ ಮಾಸ: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯವರಿಗೆ ಸಡಗರದ ಪಲ್ಲಕ್ಕಿ ಉತ್ಸವ

26/11/2024, 11:05

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಪಲ್ಲಕ್ಕಿ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಯಿತು.


ನಂಜನಗೂಡು ಸ್ಥಳೀಯ ನಯನಜ ಕ್ಷತ್ರಿಯ ಜನಾಂಗದವರು ಅನೂಚಾನವಾಗಿ ಅನಾದಿಕಾಲದಿಂದಲೂ ಕಾರ್ತಿಕ ಮಾಸದ ಕಡೆ ಸೋಮವಾರದಂದು ನಡೆಸಿಕೊಂಡು ಬರುತ್ತಿರುವ ಶ್ರೀಕಂಠೇಶ್ವರ ಸ್ವಾಮಿ ಅವರ ಪಲ್ಲಕ್ಕಿ ಉತ್ಸವ ಇದಾಗಿದೆ. ಪ್ರತಿ ವರ್ಷದಂತೆ ಕಾರ್ತಿಕ ಮಾಸದ ನಾಲ್ಕನೇ ಕಡೆ ಸೋಮವಾರದಂದು ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಅಲಂಕೃತ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ಹೂವಿನ ಪಲ್ಲಕ್ಕಿಯಲ್ಲಿ ಕೂರಿಸಿ ನುರಿತ ಹಾಗೂ ಹೆಸರಾಂತ ಕಲಾವಿದರ ಮಂಗಳ ವಾದ್ಯಗೋಷ್ಠಿಗಳೊಂದಿಗೆ ಪಟ್ಟಣದ ರಥ ಬೀದಿಗಳಲ್ಲಿ ಶ್ರೀ ಯವರ ಪಲ್ಲಕ್ಕಿ ಉತ್ಸವವನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು.
ಉತ್ಸವದ ವೇಳೆ ನಯನಜ ಕ್ಷತ್ರಿಯ ಹಾಗೂ ಮುಡಿಕಟ್ಟೆ ಸಂಘದ ವತಿಯಿಂದ ವಿವಿಧ ಬಗೆಯ ಪಟಾಕಿ ಹಾಗು ಬಾಣ ಬಿರುಸುಗಳನ್ನು ಸಿಡಿಸಲಾಯಿತು. ಇದರಿಂದಾಗಿ ಆಕಾಶದಲ್ಲಿ ಪಟಾಕಿ ಬಾಣ ಬಿರುಸುಗಳ ಬಣ್ಣ, ಬಣ್ಣದ ವಿವಿಧ ಬಗೆಯ ಚಿತ್ತಾರಗಳು ನೋಡುಗರ ಮನಸೂರೆಗೊಂಡವು.
ರಥ ಬೀದಿಯ ಇಕ್ಕೆಲಗಳಲ್ಲಿ ಭಕ್ತರು ಪೂಜಾ ಸಾಮಗ್ರಿಗಳೊಂದಿಗೆ ಬಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರಿಗೆ ಪೂಜೆ ನೀಡುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ಪಟ್ಟಣವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಶ್ರೀಯವರ ಉತ್ಸವ ಮೂರ್ತಿಗಳನ್ನು ಕಣ್ತುಂಬಿಕೊಂಡರು.
ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ರಾಚಪ್ಪ, ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಸೋಮಣ್ಣ ಮುಖಂಡರುಗಳಾದ ವಿಷಕಂಠ, ಪ್ರಕಾಶ್, ಚಂದ್ರು ಸೇರಿದಂತೆ ಸಮಾಜದ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಮುಡಿಕಟ್ಟೆ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಸಮಾಜದ ಮುಖಂಡ ನಾಗೇಶ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು