5:55 PM Saturday21 - June 2025
ಬ್ರೇಕಿಂಗ್ ನ್ಯೂಸ್
ಪಾಲಿಕೆ ಮೇಲೆ ಲೋಕಾಯುಕ್ತ ದಾಳಿ: ಕಂದಾಯ, ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗಗಳ ತೀವ್ರ… Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ?

26/11/2024, 12:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ಬಣ್ಣ ಕಂಡಿದ್ದು ಕೇವಲ ಸೇತುವೆಯ ತಡೆಗೋಡೆ ಹಾಗೂ ಅರ್ಧ ಕಾಮಾನಿಗೆ ಮಾತ್ರ ಸುಣ್ಣ ಬಣ್ಣ ಬಳಿಯಲಾಗಿತ್ತು.
ಪ್ರತಿ ವರ್ಷ ಎಳ್ಳಮವಾಸ್ಯೆಯ ಸಮಯದಲ್ಲಿ ತುಂಗಾ ಕಮಾನು ಸೇತುವೆಗೆ ಪೂರ್ಣ ಪ್ರಮಾಣದಲ್ಲಿ ಸುಣ್ಣಬಣ್ಣ ಬಳಿದು ಸಂಬಂಧ ಪಟ್ಟ ಅಧಿಕಾರಿಗಳು ಸೇತುವೆಗೆ ಮೆರಗು ನೀಡುತ್ತಿದ್ದರು. ತೆಪ್ಪೋತ್ಸವ ಸಮಿತಿಯವರು ಈ ಸೇತುವೆಗೆ ವಿಶೇಷ ರೀತಿಯ ದೀಪಾಲಂಕಾರ ಮಾಡುತ್ತಿದ್ದರು. ಎಳ್ಳಮವಾಸ್ಯೆ ಜಾತ್ರೆಯಲ್ಲಿ ಈ ದೀಪಾಲಂಕಾರ ಮಾಡಿರುವ ಸೇತುವೆಯನ್ನು ನೋಡಲೆಂದೇ ಸಾವಿರಾರು ಜನರು ಬಂದು ಪೋಟೋಗಳನ್ನು ತೆಗೆಯುತ್ತಿದ್ದರು. ಆದರೆ ಇತ್ತೀಚೆಗೆ ಎರಡು ಮೂರು ವರ್ಷಗಳಿಂದ ಕಮಾನು ಸೇತುವೆಗೆ ಸುಣ್ಣಬಣ್ಣ ಬಳಿಯದೆ ಕೇವಲ ತಡೆ ಗೋಡೆಗಳಿಗೆ ಮಾತ್ರ ಸುಣ್ಣ ಬಳಿದು ಅಧಿಕಾರಿಗಳು ಸುಮ್ಮನಾಗಿದ್ದು ಈ ಬಾರಿ ಪುರಾಣ ಪ್ರಸಿದ್ಧ ರಾಮೇಶ್ವರ ಜಾತ್ರೆ ಡಿಸೆಂಬರ್ .30, 31 ಹಾಗೂ ಜನವರಿ 1ರಂದು ಜಾತ್ರೆ ನಡೆಯಲಿದ್ದು ಜಾತ್ರೆಗೆ ದಿನಗಣನೆ ಆರಂಭವಾಗಿದೆ.
ತೆಪ್ಪೋತ್ಸವದ ದಿನ ಪ್ರೇಕ್ಷಕರ ಕೇಂದ್ರ ಬಿಂದುವಾಗಿರುವ ತುಂಗಾ ನದಿಯ ಕಮಾನು ಸೇತುವೆ ಅರ್ಧಂಬರ್ಧ ಸುಣ್ಣ ಬಣ್ಣ ಬಳಿಯುವ ಬದಲು ಈ ಬಾರಿಯಾದರೂ ಸಂಪೂರ್ಣ ಬಣ್ಣ ಬಳಿದು ಐತಿಹಾಸಿಕ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸೇತುವೆಗೆ ಮೆರಗು ನೀಡಲಿ ಎನ್ನುವುದು ಪಟ್ಟಣದ ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು