4:31 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ ಸಂಪೂರ್ಣ ಬಣ್ಣ ಹಚ್ಚುತ್ತಾರ?

26/11/2024, 12:15

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕೊಪ್ಪ ರಸ್ತೆಯಲ್ಲಿರುವ ತುಂಗಾ ನದಿಗೆ ಸರ್. ಎಂ. ವಿಶ್ವೇಶ್ವರಯ್ಯ ಅವರ ತಂತ್ರಜ್ಞಾನದಲ್ಲಿ ಕಟ್ಟಿರುವ ಶ್ರೀ ಜಯಚಾಮರಾಜೇಂದ್ರ ಕಮಾನು ಸೇತುವೆಯು ಕಳೆದ ಎಳ್ಳಮಾವಾಸ್ಯೆ ಜಾತ್ರೆಯ ವೇಳೆ ಅರ್ಧಂಬರ್ದ ಸುಣ್ಣ ಬಣ್ಣ ಕಂಡಿದ್ದು ಕೇವಲ ಸೇತುವೆಯ ತಡೆಗೋಡೆ ಹಾಗೂ ಅರ್ಧ ಕಾಮಾನಿಗೆ ಮಾತ್ರ ಸುಣ್ಣ ಬಣ್ಣ ಬಳಿಯಲಾಗಿತ್ತು.
ಪ್ರತಿ ವರ್ಷ ಎಳ್ಳಮವಾಸ್ಯೆಯ ಸಮಯದಲ್ಲಿ ತುಂಗಾ ಕಮಾನು ಸೇತುವೆಗೆ ಪೂರ್ಣ ಪ್ರಮಾಣದಲ್ಲಿ ಸುಣ್ಣಬಣ್ಣ ಬಳಿದು ಸಂಬಂಧ ಪಟ್ಟ ಅಧಿಕಾರಿಗಳು ಸೇತುವೆಗೆ ಮೆರಗು ನೀಡುತ್ತಿದ್ದರು. ತೆಪ್ಪೋತ್ಸವ ಸಮಿತಿಯವರು ಈ ಸೇತುವೆಗೆ ವಿಶೇಷ ರೀತಿಯ ದೀಪಾಲಂಕಾರ ಮಾಡುತ್ತಿದ್ದರು. ಎಳ್ಳಮವಾಸ್ಯೆ ಜಾತ್ರೆಯಲ್ಲಿ ಈ ದೀಪಾಲಂಕಾರ ಮಾಡಿರುವ ಸೇತುವೆಯನ್ನು ನೋಡಲೆಂದೇ ಸಾವಿರಾರು ಜನರು ಬಂದು ಪೋಟೋಗಳನ್ನು ತೆಗೆಯುತ್ತಿದ್ದರು. ಆದರೆ ಇತ್ತೀಚೆಗೆ ಎರಡು ಮೂರು ವರ್ಷಗಳಿಂದ ಕಮಾನು ಸೇತುವೆಗೆ ಸುಣ್ಣಬಣ್ಣ ಬಳಿಯದೆ ಕೇವಲ ತಡೆ ಗೋಡೆಗಳಿಗೆ ಮಾತ್ರ ಸುಣ್ಣ ಬಳಿದು ಅಧಿಕಾರಿಗಳು ಸುಮ್ಮನಾಗಿದ್ದು ಈ ಬಾರಿ ಪುರಾಣ ಪ್ರಸಿದ್ಧ ರಾಮೇಶ್ವರ ಜಾತ್ರೆ ಡಿಸೆಂಬರ್ .30, 31 ಹಾಗೂ ಜನವರಿ 1ರಂದು ಜಾತ್ರೆ ನಡೆಯಲಿದ್ದು ಜಾತ್ರೆಗೆ ದಿನಗಣನೆ ಆರಂಭವಾಗಿದೆ.
ತೆಪ್ಪೋತ್ಸವದ ದಿನ ಪ್ರೇಕ್ಷಕರ ಕೇಂದ್ರ ಬಿಂದುವಾಗಿರುವ ತುಂಗಾ ನದಿಯ ಕಮಾನು ಸೇತುವೆ ಅರ್ಧಂಬರ್ಧ ಸುಣ್ಣ ಬಣ್ಣ ಬಳಿಯುವ ಬದಲು ಈ ಬಾರಿಯಾದರೂ ಸಂಪೂರ್ಣ ಬಣ್ಣ ಬಳಿದು ಐತಿಹಾಸಿಕ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸೇತುವೆಗೆ ಮೆರಗು ನೀಡಲಿ ಎನ್ನುವುದು ಪಟ್ಟಣದ ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು