10:35 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಬಳ್ಳಾರಿಯ ಕ್ರೈಸ್ತ ಧರ್ಮ ಕ್ಷೇತ್ರಕ್ಕೆ ಅಮೃತ ಮಹೋತ್ಸವದ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

27/11/2024, 09:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ರಾಯಚೂರು, ಕೊಪ್ಪಳ, ಕಲಬುರಗಿಯನ್ನು ಒಳಗೊಂಡು ಬಳ್ಳಾರಿ ಕೇಂದ್ರಿತವಾಗಿ 1949ರಲ್ಲಿ ರಚನೆಯಾದ ಕ್ರೈಸ್ತ ಧರ್ಮ ಕ್ಷೇತ್ರ (ಡಯಾಸಿಸ್‌) ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಅತಿಥಿಯಾಗಿ ಆಗಮಿಸುವರು.
ಮದ್ರಾಸ್‌ನ ಕ್ರೈಸ್ತ ಧರ್ಮ ಕ್ಷೇತ್ರದ ಭಾಗವಾಗಿದ್ದ ಬಳ್ಳಾರಿಯು 1949 ಮಾರ್ಚ್ 10ರಲ್ಲಿ ವಿಭಜನೆಗೊಂಡಿತು. ಆ ಮೂಲಕ ಪ್ರತ್ಯೇಕ ಧರ್ಮಕ್ಷೇತ್ರವಾಗಿ ಗುರುತಿಸಿಕೊಂಡಿತು. ಹೀಗೆ ರಚನೆಯಾದ ಬಳ್ಳಾರಿ ಧರ್ಮ ಕ್ಷೇತ್ರಕ್ಕೆ ಜಾನ್ ಹೋಗನ್ ಎಂಬುವವರನ್ನು ಮೊದಲು ಬಿಷಪ್ ಆಗಿ ನೇಮಿಸಲಾಗಿತ್ತು. ಅವರು ಇಂಗ್ಲೆಂಡ್‌ನವರಾಗಿದ್ದರು. ಆ ಬಳಿಕ ಆಂಬ್ರೋಸ್‌ ಎಂಬುವವರು ಬಿಷಪ್‌ ಆಗಿದ್ದರು. ಅವರು ಚೆನ್ನೈನವರಾಗಿದ್ದರು. ನಂತರ, ಕೊಡಗಿನ ವೀರಾಜಪೇಟೆಯ ಜೋಸೆಫ್‌ ಡಿಸಿಲ್ವ ಬಿಷಪ್‌ ಆದರು. ಸದ್ಯ 16 ವರ್ಷಗಳಿಂದ ಮಂಗಳೂರಿನ ಹೆನ್ರಿ ಡಿಸೋಜಾ ಅವರು ಬಿಷಪ್‌ ಆಗಿದ್ದಾರೆ.
ಸದ್ಯ ಬಳ್ಳಾರಿ ಕ್ರೈಸ್ತ ಧರ್ಮ ಕ್ಷೇತ್ರದ ಅಡಿಯಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳು ಇದ್ದವು. ಈಗ ವಿಜಯನಗರ ಹೊಸದಾಗಿ ಸೇರ್ಪಡೆಯಾಗಿದ್ದರೆ, ಕಲಬುರಗಿ ಪ್ರತ್ಯೇಕವಾಗಿದೆ. ಬಳ್ಳಾರಿ ಧರ್ಮಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಧರ್ಮ ಗುರುಗಳಿದ್ದಾರೆ ಎನ್ನುವ ಮಾಹಿತಿ ಇದೆ.
*ಅಮೃತ ಮಹೋತ್ಸವಕ್ಕೆ ಸಿಎಂ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬಳ್ಳಾರಿ ಪ್ರವಾಸ ಕೈಗೊಂಡಿದ್ದು 4.30ಕ್ಕೆ ಬಳ್ಳಾರಿಯ ಆರೋಗ್ಯ ಮಾತೆ ಚರ್ಚ್‌ನಲ್ಲಿ ನಡೆಯಲಿರುವ ಕ್ರೈಸ್ತ ಧರ್ಮ ಕ್ಷೇತ್ರದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು