8:38 AM Monday11 - May 2026
ಬ್ರೇಕಿಂಗ್ ನ್ಯೂಸ್
ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ

ಇತ್ತೀಚಿನ ಸುದ್ದಿ

ಬಳ್ಳಾರಿಯ ಕ್ರೈಸ್ತ ಧರ್ಮ ಕ್ಷೇತ್ರಕ್ಕೆ ಅಮೃತ ಮಹೋತ್ಸವದ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

27/11/2024, 09:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ರಾಯಚೂರು, ಕೊಪ್ಪಳ, ಕಲಬುರಗಿಯನ್ನು ಒಳಗೊಂಡು ಬಳ್ಳಾರಿ ಕೇಂದ್ರಿತವಾಗಿ 1949ರಲ್ಲಿ ರಚನೆಯಾದ ಕ್ರೈಸ್ತ ಧರ್ಮ ಕ್ಷೇತ್ರ (ಡಯಾಸಿಸ್‌) ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಅತಿಥಿಯಾಗಿ ಆಗಮಿಸುವರು.
ಮದ್ರಾಸ್‌ನ ಕ್ರೈಸ್ತ ಧರ್ಮ ಕ್ಷೇತ್ರದ ಭಾಗವಾಗಿದ್ದ ಬಳ್ಳಾರಿಯು 1949 ಮಾರ್ಚ್ 10ರಲ್ಲಿ ವಿಭಜನೆಗೊಂಡಿತು. ಆ ಮೂಲಕ ಪ್ರತ್ಯೇಕ ಧರ್ಮಕ್ಷೇತ್ರವಾಗಿ ಗುರುತಿಸಿಕೊಂಡಿತು. ಹೀಗೆ ರಚನೆಯಾದ ಬಳ್ಳಾರಿ ಧರ್ಮ ಕ್ಷೇತ್ರಕ್ಕೆ ಜಾನ್ ಹೋಗನ್ ಎಂಬುವವರನ್ನು ಮೊದಲು ಬಿಷಪ್ ಆಗಿ ನೇಮಿಸಲಾಗಿತ್ತು. ಅವರು ಇಂಗ್ಲೆಂಡ್‌ನವರಾಗಿದ್ದರು. ಆ ಬಳಿಕ ಆಂಬ್ರೋಸ್‌ ಎಂಬುವವರು ಬಿಷಪ್‌ ಆಗಿದ್ದರು. ಅವರು ಚೆನ್ನೈನವರಾಗಿದ್ದರು. ನಂತರ, ಕೊಡಗಿನ ವೀರಾಜಪೇಟೆಯ ಜೋಸೆಫ್‌ ಡಿಸಿಲ್ವ ಬಿಷಪ್‌ ಆದರು. ಸದ್ಯ 16 ವರ್ಷಗಳಿಂದ ಮಂಗಳೂರಿನ ಹೆನ್ರಿ ಡಿಸೋಜಾ ಅವರು ಬಿಷಪ್‌ ಆಗಿದ್ದಾರೆ.
ಸದ್ಯ ಬಳ್ಳಾರಿ ಕ್ರೈಸ್ತ ಧರ್ಮ ಕ್ಷೇತ್ರದ ಅಡಿಯಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳು ಇದ್ದವು. ಈಗ ವಿಜಯನಗರ ಹೊಸದಾಗಿ ಸೇರ್ಪಡೆಯಾಗಿದ್ದರೆ, ಕಲಬುರಗಿ ಪ್ರತ್ಯೇಕವಾಗಿದೆ. ಬಳ್ಳಾರಿ ಧರ್ಮಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಧರ್ಮ ಗುರುಗಳಿದ್ದಾರೆ ಎನ್ನುವ ಮಾಹಿತಿ ಇದೆ.
*ಅಮೃತ ಮಹೋತ್ಸವಕ್ಕೆ ಸಿಎಂ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬಳ್ಳಾರಿ ಪ್ರವಾಸ ಕೈಗೊಂಡಿದ್ದು 4.30ಕ್ಕೆ ಬಳ್ಳಾರಿಯ ಆರೋಗ್ಯ ಮಾತೆ ಚರ್ಚ್‌ನಲ್ಲಿ ನಡೆಯಲಿರುವ ಕ್ರೈಸ್ತ ಧರ್ಮ ಕ್ಷೇತ್ರದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು