11:41 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬಳ್ಳಾರಿಯ ಕ್ರೈಸ್ತ ಧರ್ಮ ಕ್ಷೇತ್ರಕ್ಕೆ ಅಮೃತ ಮಹೋತ್ಸವದ ಸಂಭ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿ

27/11/2024, 09:09

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ರಾಯಚೂರು, ಕೊಪ್ಪಳ, ಕಲಬುರಗಿಯನ್ನು ಒಳಗೊಂಡು ಬಳ್ಳಾರಿ ಕೇಂದ್ರಿತವಾಗಿ 1949ರಲ್ಲಿ ರಚನೆಯಾದ ಕ್ರೈಸ್ತ ಧರ್ಮ ಕ್ಷೇತ್ರ (ಡಯಾಸಿಸ್‌) ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.
ಈ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಅತಿಥಿಯಾಗಿ ಆಗಮಿಸುವರು.
ಮದ್ರಾಸ್‌ನ ಕ್ರೈಸ್ತ ಧರ್ಮ ಕ್ಷೇತ್ರದ ಭಾಗವಾಗಿದ್ದ ಬಳ್ಳಾರಿಯು 1949 ಮಾರ್ಚ್ 10ರಲ್ಲಿ ವಿಭಜನೆಗೊಂಡಿತು. ಆ ಮೂಲಕ ಪ್ರತ್ಯೇಕ ಧರ್ಮಕ್ಷೇತ್ರವಾಗಿ ಗುರುತಿಸಿಕೊಂಡಿತು. ಹೀಗೆ ರಚನೆಯಾದ ಬಳ್ಳಾರಿ ಧರ್ಮ ಕ್ಷೇತ್ರಕ್ಕೆ ಜಾನ್ ಹೋಗನ್ ಎಂಬುವವರನ್ನು ಮೊದಲು ಬಿಷಪ್ ಆಗಿ ನೇಮಿಸಲಾಗಿತ್ತು. ಅವರು ಇಂಗ್ಲೆಂಡ್‌ನವರಾಗಿದ್ದರು. ಆ ಬಳಿಕ ಆಂಬ್ರೋಸ್‌ ಎಂಬುವವರು ಬಿಷಪ್‌ ಆಗಿದ್ದರು. ಅವರು ಚೆನ್ನೈನವರಾಗಿದ್ದರು. ನಂತರ, ಕೊಡಗಿನ ವೀರಾಜಪೇಟೆಯ ಜೋಸೆಫ್‌ ಡಿಸಿಲ್ವ ಬಿಷಪ್‌ ಆದರು. ಸದ್ಯ 16 ವರ್ಷಗಳಿಂದ ಮಂಗಳೂರಿನ ಹೆನ್ರಿ ಡಿಸೋಜಾ ಅವರು ಬಿಷಪ್‌ ಆಗಿದ್ದಾರೆ.
ಸದ್ಯ ಬಳ್ಳಾರಿ ಕ್ರೈಸ್ತ ಧರ್ಮ ಕ್ಷೇತ್ರದ ಅಡಿಯಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳು ಇದ್ದವು. ಈಗ ವಿಜಯನಗರ ಹೊಸದಾಗಿ ಸೇರ್ಪಡೆಯಾಗಿದ್ದರೆ, ಕಲಬುರಗಿ ಪ್ರತ್ಯೇಕವಾಗಿದೆ. ಬಳ್ಳಾರಿ ಧರ್ಮಕ್ಷೇತ್ರದಲ್ಲಿ 100ಕ್ಕೂ ಹೆಚ್ಚು ಧರ್ಮ ಗುರುಗಳಿದ್ದಾರೆ ಎನ್ನುವ ಮಾಹಿತಿ ಇದೆ.
*ಅಮೃತ ಮಹೋತ್ಸವಕ್ಕೆ ಸಿಎಂ:* ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬಳ್ಳಾರಿ ಪ್ರವಾಸ ಕೈಗೊಂಡಿದ್ದು 4.30ಕ್ಕೆ ಬಳ್ಳಾರಿಯ ಆರೋಗ್ಯ ಮಾತೆ ಚರ್ಚ್‌ನಲ್ಲಿ ನಡೆಯಲಿರುವ ಕ್ರೈಸ್ತ ಧರ್ಮ ಕ್ಷೇತ್ರದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು