5:46 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಗೆ ಲಕ್ಷದೀಪೋತ್ಸವ ಸಂಭ್ರಮ: ನೆರೆದ ಭಕ್ತ ಸಾಗರ; 29ರಂದು ಸರ್ವಧರ್ಮ ಸಮ್ಮೇಳನ

27/11/2024, 20:49

ಧರ್ಮಸ್ಥಳ(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯ ಮಂಗಳಪರ್ವದಲ್ಲಿ ಸಂಭ್ರಮ- ಸಡಗರ, ಭಯ-ಭಕ್ತಿಯಿಂದ ಆರಂಭಗೊಂಡಿದೆ.
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದೆ.


*ಪಾದಯಾತ್ರೆಯಲ್ಲಿ ಆಗಮಿಸಿದ ಭಕ್ತರ ದಂಡು:* ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ 25 ಸಾವಿರಕ್ಕೂ ಅಧಿಕ ಭಕ್ತರು ಪಾದಯಾತ್ರೆಯಲ್ಲಿ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಧರ್ಮಸ್ಥಳಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಮುಂತಾದವರು ನೇತೃತ್ವ ವಹಿಸಿದ್ದರು.
*ಕಾರ್ಯಕ್ರಮಗಳ ವಿವರ ಹೀಗಿದೆ:* ಲಲಿತಕಲಾ ಗೋಷ್ಠಿ – ನ. 28ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5-30 ರಿಂದ ನಾಗಸ್ವರ ವಾದನ, 7ರಿಂದ ಸಾತ್ವಿಕ ಸಂಗೀತ, 8ರಿಂದ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ನಡೆಯಲಿದೆ.
*ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ:* ನ.29ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಉದ್ಘಾಟಿಸುವರು. ಬೆಂಗಳೂರಿನ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಸಂಶೋಧಕ ಡಾ.ಜಿ.ಬಿ.ಹರೀಶ, ನಿವೃತ್ತ ಉಪನ್ಯಾಸಕ ಡಾ.ಜೋಸೆಫ್ ಎನ್.ಎಂ., ಶಿಕ್ಷಕ ಮೆಹತಾಬ ಇಬ್ರಾಹಿಮ್ ಸಾಬ ಕಾಗವಾಡ ಅವರಿಂದ ಉಪನ್ಯಾಸ ನಡೆಯಲಿದೆ. ರಾತ್ರಿ 8-30 ರಿಂದ ಭರತನಾಟ್ಯ ಕಾರ್ಯಕ್ರಮ ಇರಲಿದೆ.
ನ.30ರಂದು ಸಂಜೆ 5 ಗಂಟೆಯಿಂದ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನವನ್ನು ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನನೀ ಡಾ.ರಾ.ಗಣೇಶ ಉದ್ಘಾಟಿಸುವರು. ಲೇಖಕ, ಸಂಶೋಧಕ ಡಾ. ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ. ಪ್ರಮೀಳಾ ಮಾಧವ, ಡಾ. ಬಿ.ವಿ.ವಸಂತ ಕುಮಾರ್ ಮೈಸೂರು, ಪ್ರೊ. ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದೆ. ಬಳಿಕ ರಾತ್ರಿ 8-30ರಿಂದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮವಿದೆ. ನಿತ್ಯ ಸಂಜೆ 6-30 ರಿಂದ ರಾತ್ರಿ 11ರ ವರೆಗೆ ವಸ್ತುಪ್ರದರ್ಶನ ಮಂಟಪದಲ್ಲಿ ಹಾಗೂ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಂಸ್ಕೃತಿಕ – ಸಂಗೀತ ಹಬ್ಬವೇ ನಡೆಯಲಿದೆ.
*ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ:* ನ.26ರಿಂದ ಡಿ.1ರವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದೆ. ನ.26ರಂದು ಬೆಳಗ್ಗೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಉದ್ಘಾಟಿಸಲಿದ್ದಾರೆ. ವಸ್ತು ಪ್ರದರ್ಶನದಲ್ಲಿ ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿ ಕೈಗಾರಿಕೆಗಳಿಗೆ ಸಂಬಂಧಿಸಿದ 300ಕ್ಕೂ ಹೆಚ್ಚು ಮಳಿಗೆಗಳಿರಲಿವೆ.
*ಲಕ್ಷದೀಪೋತ್ಸವ ಉತ್ಸವಗಳು:*
ನ.27: ಕೆರೆ ಕಟ್ಟೆ ಉತ್ಸವ
ನ.28: ಲಲಿತೋದ್ಯಾನ ಉತ್ಸವ
ನ.29: ಕಂಚಿಮಾರು ಕಟ್ಟೆ ಉತ್ಸವ
ನ.30: ಗೌರಿಮಾರು ಕಟ್ಟೆ ಉತ್ಸವ
ಡಿ.1: ಸಮವಸರಣ ಪೂಜೆ – ಸಂಜೆ 6-30ರಿಂದ ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ.
ಜಿನಗಾನೋತ್ಸವ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು