7:02 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್

28/11/2024, 20:55

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಬಸ್ ಸರಿಯಾದ ವೇಳೆಗೆ ಬಾರದನ್ನು ವಿರೋಧಿಸಿ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಮಾರನಾಳ ತಾಂಡ ಕ್ರಾಸ ಬಳ್ಳಿ ಕೆಎಸ್‌ಆರ್‌ಟಿಸಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.


ಸರಿಯಾದ ಸಮಯಕ್ಕೆ ಬಸ್ ಬರದೇ ಇರುವ ಕಾರಣಕ್ಕೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಸಮಯಕ್ಕೆ ಬರುವ ಬಸ್ಸುಗಳು ಬೇರೆ ಸಮಯಕ್ಕೆ ವರ್ಗಾಯಿಸಿರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ. ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ಬಸುಗಳು ಒದಗಿಸಿ ಕೊಡಿ. ಪ್ರತಿ ವರ್ಷವೂ ಮನವಿ ಮಾಡುತ್ತಲೇ ಬರುತ್ತಿದ್ದೇವೆ.
ಅದರೆ ಯಾರು ಇದರ ವಿಚಾರವಾಗಿ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಇದು ನಮ್ಮ ಕೊನೆಯ ಮಾನವಿ ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪಾಲಕರು ಸೇರಿ ರಸ್ತೆ ತಡೆದು ಪ್ರತಿಭಟನೆ ಮಾಡುವಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಸುರಪುರ್ ಘಟಕದ ಮೇಲಧಿಕಾರಿಗಳಿಗೆ ದೂರವಾಣಿ ಮುಖಾಂತರ ವಿದ್ಯಾರ್ಥಿಗಳು ಅಳಿಲನ್ನು ತೋರಿಕೊಂಡರು. ಅದನ್ನು ಆಲಿಸಿದ ಮೇಲಾಧಿಕಾರಿಯು ಖಂಡಿತ ಸರಿಯಾದ ಸಮಯಕ್ಕೆ ತಮಗೆ ಬಸ್ಸು ಒದಗಿಸುವುದಾಗಿ ಭರವಸೆಯನ್ನು ನೀಡಿದರು .
ಇದೇ ಸಂದರ್ಭದಲ್ಲಿ ಕೊಡೆಕಲ್ ಹೋಬಳಿಯ ಉಪ ತಹಶೀಲ್ದಾರ್ರಾದ ಕಲ್ಲಪ್ಪ ಜಂಜಿಗಡ್ಡಿ, ನಾರಾಯಣಪುರ ಸಂಚಾರಕ ನಿಯಂತ್ರಕರಾದ ಅಶೋಕ್ , ನಾರಾಯಣಪುರ ಪೊಲೀಸ್ ಠಾಣೆ ಎ.ಎಸ್.ಐ ಸುಭಾಷ್ ಚಂದ್ರ, ರಿಯಾಜ್ ಸಿಬ್ಬಂದಿ ಹಾಗೂ ಕೊಡೆಕಲ್ ಪೊಲೀಸ್ ಠಾಣೆ ಎ.ಎಸ್.ಐ ಸಂಗಪ್ಪ, ಸಿಬ್ಬಂದಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು