8:37 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ

29/11/2024, 15:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿನಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು