2:51 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಾಗ್ದೇವಿ ಶಿಕ್ಷಣ ಸಂಸ್ಥೆಯ ಬೆಳ್ಳಿಹಬ್ಬ ಆಚರಣೆ: ಪ್ರತಿಭಾ ಪುರಸ್ಕಾರ, ಕಾಲೇಜು ವಿದ್ಯಾರ್ಥಿಗಳ ಸಂವಾದ

29/11/2024, 21:26

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com
ಚಿಕ್ಕದಾಗಿ ಹುಟ್ಟಿಕೊಂಡ ಸಂಸ್ಥೆ ಈಗ ಬೆಳ್ಳಿ ಸಂಭ್ರಮದತ್ತ ಬೆಳೆದು ನಿಂತಿದೆ. ವಾಗ್ದೇವಿ ಶಿಕ್ಷಣ ಸಂಸ್ಥೆಯನ್ನು 1999-2000 ದಲ್ಲಿ ಸ್ಥಾಪನೆ ಮಾಡಲಾಯಿತು. ಅಲ್ಲಿಂದ ಇಲ್ಲಿಯವರೆಗೆ ಎಸ್ ಎಸ್ ಎಲ್ ಸಿಯಲ್ಲಿ ಇಲ್ಲಿಯವರೆಗೆ 35 ರಾಜ್ಯ ಮಟ್ಟದ ರ‌್ಯಾಂಕ್, ಕಾಲೇಜಿನಲ್ಲಿ 16 ರ‌್ಯಾಂಕ್ ಕೊಟ್ಟಿದ್ದೇವೆ ಎಂದು ಸತ್ಪತ ಟ್ರಸ್ಟ್ ಅಧ್ಯಕ್ಷರಾದ ಜಗದೀಶ್ ತಿಳಿಸಿದರು.

ಶುಕ್ರವಾರ ಪಟ್ಟಣದ ಗಾಯತ್ರಿ ಮಂದಿರದಲ್ಲಿ ನಡೆದ ಬೆಳ್ಳಿ ಸಂಭ್ರಮದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಗೌರವಾರ್ಪಣೆ ಮತ್ತು ಪತ್ರಕರ್ತರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಮನೋರಂಜನೆ ಕಲೆ, ಕ್ರೀಡೆ ಎಷ್ಟು ಮುಖ್ಯವೋ ಮಕ್ಕಳು ನಮ್ಮಲ್ಲಿ ಇರುವ ಸಂವಿಧಾನದ ಪ್ರಮುಖ ಭಾಗವಾಗಿರುವ ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ ಇವೆಲ್ಲವೂ ಬೇಕು. ಇದರ ಜೊತೆಗೆ ಪತ್ರಿಕಾರಂಗದ ಬಗ್ಗೆ ಸಹ ಮಕ್ಕಳಿಗೆ ತಿಳಿಯಬೇಕು. ಈಗಾಗಲೇ
ಕಾನೂನಿಗೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಮಾಡಿದ್ದೇವೆ, ಇವತ್ತು ಪತ್ರಿಕಾರಂಗದ ಬಗ್ಗೆ ಮಕ್ಕಳಿಗೆ ತಿಳಿಸುವ ಸಲುವಾಗಿ ಸಂವಾದ ನಡೆಸುತ್ತಿದ್ದೇವೆ ಎಂದರು.
ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ ಮಾತನಾಡಿ, ವಾಗ್ದೇವಿ ಶಿಕ್ಷಣ ಸಂಸ್ಥೆ ಮುಖ್ಯಸ್ಥರಾದ ಜಗದೀಶ್ ಅವರನ್ನು ತುಂಗಾ ಕಾಲೇಜು ಶಿಕ್ಷಕರಾಗಿರುವಾಗಿನಿಂದ ನೋಡುತ್ತಿದ್ದೇವೆ. ಅವರನ್ನು ಅತ್ಯಂತ ಕ್ರಿಯಾಶೀಲ ಶಿಕ್ಷಕ ಎಂದರೆ ತಪ್ಪಾಗಲಾರದು. ನಾವು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬೇರೆ ಬೇರೆ ಊರುಗಳಿಗೆ ಕಳುಹಿಸುತ್ತೇವೆ ಆದರೆ ಅಲ್ಲಿನ ಶಿಕ್ಷಣವನ್ನು ಇಲ್ಲಿಯೇ ನೀಡಬೇಕು ಎಂದು ಭಾವಿಸಿ ಇಲ್ಲಿಯವರೆಗೆ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆ ವಾಗ್ದೇವಿ ಎಂದು ಹೇಳಿದರು.
ಶಿಕ್ಷಣ ಮಾತ್ರವಲ್ಲದೆ ಬೇರೆ ಬೇರೆ ವಿಭಾಗದಲ್ಲಿ ಸಹ ಮಕ್ಕಳು ಮುಂದಿರುತ್ತಾರೆ. ಅಂತಹ ಕಲೆಯನ್ನು ಹೊರ ತರುವ ಕೆಲಸ ಶಿಕ್ಷಕರು ಮಾಡಬೇಕು. ದೇಶವನ್ನು ಮುನ್ನಡೆಸಲು ರ‌್ಯಾಂಕ್ ಮಾತ್ರ ಇದ್ದರೆ ಆಗುತ್ತದೆ ಎಂದು ಭಾವಿಸುವುದಕ್ಕಿಂತ ಕಲೆ ಕ್ರೀಡೆ ಯಾವುದರಲ್ಲಿ ಆದರೂ ಮಕ್ಕಳು ದೇಶದ ಗಮನ ಸೆಳೆಯಬಹುದು ಎಂದರು.
ಕ್ರೀಡೆ, ರಸಪ್ರಶ್ನೆ, ಕರಾಟೆ ಸೇರಿ ಹಲವು ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮತ್ತು ಕಳೆದ ಬಾರಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ರ‌್ಯಾಂಕ್ ಪಡೆದ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮತ್ತು ಶಾಲೆಯಲ್ಲಿ ಕೆಲಸ ನಿರ್ವಹಿಸಿದ್ದ ಶಿಕ್ಷಕರಿಗೆ ಗೌರವ ಪುರಸ್ಕಾರ ನೀಡಲಾಯಿತು.
ನಂತರ ಕಾಲೇಜು ವಿದ್ಯಾರ್ಥಿಗಳು ಹಾಗೂ ತೀರ್ಥಹಳ್ಳಿ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಹರಿ ಜೋಯ್ಸ್, ಪ್ರಾರ್ಥನೆಯನ್ನು ನಿಧಿ ಸುರೇಶ್, ಸ್ವಾಗತ ಭಾಷಣವನ್ನು ಧೃತಿ ಎಂ ಆರ್ ಮಾಡಿದರು.
ಸಭೆಯಲ್ಲಿ ಸತ್ಪತ ಟ್ರಸ್ಟ್ ಸದಸ್ಯರಾದ ಧರ್ಮೇಶ್, ಪತ್ರಕರ್ತರ ಸಂಘದ ಅಧ್ಯಕ್ಷರಾದ ಮೋಹನ್ ಮುನ್ನೂರು, ತುಂಗಾ ಕಾಲೇಜು ಮುಖ್ಯಸ್ಥರಾಗಿದ್ದ ಪ್ರಕಾಶ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು