5:40 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ

29/11/2024, 22:48

ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಬಂಟ್ವಾಳ ವಲಯದ ಆಧ್ಯಾತ್ಮಿಕ ನಿರ್ದೇಶಕರಾದ ವಂ|ಫಾ| ವಲೇರಿಯನ್‌ ಡಿಸೋಜ, ಕಾರ್ಯಾಗಾರದ ಅಧ್ಯಕ್ಷರಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್, ಮುಖ್ಯ ಅತಿಥಿಗಳಾಗಿ ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಬಂಟ್ವಾಳ ವಲಯದ ಅಧ್ಯಕ್ಷರಾದ ಜೋನ್‌ ಲಸ್ರಾದೊ, ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ದಿ ಬ್ಯಾಂಕ್‌ ಅಧ್ಯಕ್ಷರಾದ ಅರುಣ್‌ ರೋಶನ್‌ ಡಿಸೋಜ, ಕಥೊಲಿಕ್‌ ಸಭಾ ಮಂಗ್ಳುರ್‌ ಪ್ರದೇಶ್‌ (ರಿ.) ಕೇಂದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಸ್ಟ್ಯಾನಿ ಲೋಬೊರ ಅವರು ಉಪಸ್ಥಿತರಿದ್ದರು,
ತರಬೇತುದಾರರಾಗಿ ಕವಯತ್ರಿಯಾದ ಡಿಂಪಲ್‌ ಜೆನಿಫರ್ ಫೆರ್ನಾಂಡಿಸ್‌ ಅವರು ಕವಿತೆ ರಚನೆ ಬಗ್ಗೆ ಹಾಗೂ ತಮ್ಮ ಅನುಭವದ ಬಗ್ಗೆ ಮಾಹಿತಿ ಹಂಚಿಕೊಂಡರು. ಕವನಗಳು ಹೇಗೆ ಉದ್ಬವಗೊಳ್ಳುತ್ತವೆ, ಯಾವ ರೀತಿ ಕವನ ಬರೆಯಬಹುದೆಂದು ಮಾಹಿತಿ ನೀಡಿದರು. ಯುವಕವಿ, ಕಥೆಗಾರರಾದ ಗ್ಲ್ಯಾನಿಷ್‌ ಮಾರ್ಟಿಸ್‌ ಯುವ ಲೇಖಕರಿಗೆ ಕಥೆ ಬರೆಯುವ ವಿಧಾನ/ ಹಂತಗಳ ಬಗ್ಗೆ ಮಾಹಿತಿ ನೀಡಿ, ಕಥೆ ಹೇಗೆ ಬರೆಯಬೇಕೆಂದು ತಿಳಿಸಿದರು.
ಸಮರ್ಥ್‌ ಭಟ್‌ರವರ ಸದಸ್ಯ ಸಂಚಾಲಕತ್ವದಲ್ಲಿ ಈ ನಡೆಯಿತು, ಅಕಾಡೆಮಿ ಸದಸ್ಯರುಗಳಾದ ನವೀನ್‌ ಲೋಬೊ, ಅಕ್ಷತಾ ಎಂ. ನಾಯಕ್‌ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು