6:18 AM Friday10 - April 2026
ಬ್ರೇಕಿಂಗ್ ನ್ಯೂಸ್
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಮುಳಿಯ ಜ್ಯುವೆಲ್ಸ್ ನಿಂದ ಕನ್ನಡ ಕಾರ್ಯಕ್ರಮ: ವಿವಿಧ ನೃತ್ಯ ಸ್ಪರ್ಧೆ

30/11/2024, 15:29

ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಕನ್ನಡ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಕರ್ನಾಟಕದ ವಿವಿಧ ನೃತ್ಯ ಸ್ಪರ್ಧೆಯ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡಿದ ಹೋಟೆಲ್ ಮಾಲಕರ ಸಂಘದ ರಾಜ್ಯಾಧ್ಯಕ್ಷ ಜಿ.ಕೆ.ಶೆಟ್ಟಿ ಮಾತನಾಡಿ ” ಮಕ್ಕಳನ್ನು ಹುರಿದುಂಬಿಸುವ ಈ ಬಗೆಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಹಾಗೆಯೆ ಹೋಟೆಲ್ ಕಾರ್ಮಿಕರಲ್ಲಿ ಕನ್ನಡದ ಅಭಿಮಾನ ಹೆಚ್ಚಾಗಿ ಕಾಣಬಹುದು” ಎಂದರು. ಇನ್ನೋರ್ವ ಅಥಿತಿ, ಮಿಸೆಸ್ ಯುನಿವರ್ಸ ಸತ್ಯವತಿ ಬಸವರಾಜು ಶುಭ ಹಾರೈಸಿದರು.
ಅಧ್ಯಕ್ಷ ಸ್ಥಾನದಲ್ಲಿ ಮಾತನಾಡಿದ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ “ಮುಳಿಯದ ವಿಶೇಷ ಡಿಸೈನ್ ಗಳ ಮಾರಾಟದ ಜೊತೆಗೆ ಸಾಮಾಜಿಕ ಕಳಕಳಿ ಇರುವುದು ವಿಶೇಷ” ಎಂದರು.
ಈ ಕಾರ್ಯಕ್ರಮ ಸಂಧ್ಯಾ ಜಯರಾಮ್ ಅವರ ಸಹಯೋಗದಲ್ಲಿ ನಡೆಯಿತು . ಸಮಾರೋಪ ಸಮಾರಂಭದಲ್ಲಿ ಚಿತ್ರ ನಟ ಸ್ಮೈಲ್ ಶಿವು ಹಾಗೂ ಕಾಸಿಯಾದ ಗೌರವ ಕಾರ್ಯದರ್ಶಿ, ಉದ್ಯಮಿ ಸುರೇಶ್ ಎನ್. ಸಾಗರ್ ವೇದಿಕೆಯಲ್ಲಿದ್ದು, ವಿಜೇತರಿಗೆ ಬಹುಮಾನ ವಿತರಿಸಿದರು.

ಮುಳಿಯ ಪ್ರಬಂಧಕರಾದ ಎನ್.ಸುಬ್ರಮಣ್ಯ ಭಟ್, ಸಂಜೀವ, ಶಾಮ್, ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು