5:27 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ರೋಮ್ ನಲ್ಲಿ ಸ್ಪೀಕರ್ ಯು. ಟಿ. ಖಾದರ್ ಗೆ ಸನ್ಮಾನ: ಕ್ರೈಸ್ತ ಸಂಘಟನೆಗಳಿಂದ ಆಯೋಜನೆ

30/11/2024, 15:33

ರೋಮ್(reporterkarnataka.com): ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೈದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು ಪಡೆಯುವ ಉನ್ನತ ಶಿಕ್ಷಣ ಮತ್ತು ನಿಮ್ಮ ಸೇವಾ ಮನೋಭಾವ, ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಲು ನಿಮಗೆ ಪ್ರೇರಣೆಯಾಗಲಿ” ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಯು.ಟಿ. ಖಾದರ್ ಹೇಳಿದರು.

ಅವರು ಇಟಲಿಯ ರೋಮ್ ನಲ್ಲಿರುವ ಕರ್ನಾಟಕ ಮೂಲದ ಕ್ರೈಸ್ತ ಸಂಘಟನೆಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.
ಅಂತಾರಾಷ್ಟ್ರೀಯ ಅಂತರ್ ಧರ್ಮೀಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರೋಮ್ ಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಸಂತ ಪೀಟರ್ ಪೊಂತಿಫಿಕಾಲ್ ಕೊಲೆಜ್ ನಲ್ಲಿ ‘ಕೊಂಕಣಿ ಕುಟಾಮ್ ರೋಮ್’ ಮತ್ತು ‘ಕನ್ನಡಿಗರ ಒಕ್ಕೂಟ, ರೋಮ್’ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸ್ಪೀಕರ್ ಖಾದರ್ ಭಾಗವಹಿಸಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರು ಫಾದರ್ ಜಿಲ್ ಡಿಸೋಜಾ, ಯು.ಟಿ. ಖಾದರ್ ರವರ ಸೇವಾ ಸಾಧನೆಯನ್ನು ವಿವರಿಸಿದರು. ಫಾದರ್ ಜೋವಿನ್ ಸಿಕ್ವೆರಾರವರು ಕೊಂಕಣಿ ಸಂಘಟನೆ ಮತ್ತು ಫಾದರ್ ರಿಚಾರ್ಡ್ ಕನ್ನಡ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಸಂತ ಪೀಟರ್ ಪೊಂತಿಫಿಕಾಲ್ ಕೊಲೆಜ್ ನ ರೆಕ್ಟರ್ ಫಾದರ್ ಜೋಸ್ ತಮ್ಮ ಸಂದೇಶ ನೀಡಿ ಶುಭ ಹಾರೈಸಿದರು. ಉಭಯ ಸಂಘಟನೆಗಳ ಪರವಾಗಿ ಖಾದರ್ ಅವರನ್ನು ಸನ್ಮಾನಿಸಲಾಯಿತು.
ಫಾದರ್ ಸೆಬಾಸ್ಟಿಯನ್ ಪ್ರಾರ್ಥನಾ ವಿಧಿ ನೆರವೇರಿಸಿದರು. ಕಾರ್ಯಕ್ರಮದ ಸಂಯೋಜಕ ಫಾದರ್ ಲೋರೆನ್ಸ್ ನೊರೊನ್ಹಾ ಸ್ವಾಗತಿಸಿದರು, ಸಹ-ಸಂಯೋಜಕಿ ವ್ಯಾಟಿಕನ್ ಸಂವಹನ ವಿಭಾಗದ ಧರ್ಮಭಗಿನಿ ಸಿಸ್ಟರ್ ಕಾರ್ಮೆಲ್ ವಂದನಾರ್ಪಣೆಗೈದರು. ಫಾದರ್ ರೊಯ್ಸನ್ ಫೆರ್ನಾಂಡಿಸ್, ಹಿರ್ಗಾನ ಕಾರ್ಯಕ್ರಮವನ್ನು
ನಿರ್ವಹಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು