6:46 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ರೋಮ್ ನಲ್ಲಿ ಸ್ಪೀಕರ್ ಯು. ಟಿ. ಖಾದರ್ ಗೆ ಸನ್ಮಾನ: ಕ್ರೈಸ್ತ ಸಂಘಟನೆಗಳಿಂದ ಆಯೋಜನೆ

30/11/2024, 15:33

ರೋಮ್(reporterkarnataka.com): ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೈದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು ಪಡೆಯುವ ಉನ್ನತ ಶಿಕ್ಷಣ ಮತ್ತು ನಿಮ್ಮ ಸೇವಾ ಮನೋಭಾವ, ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಲು ನಿಮಗೆ ಪ್ರೇರಣೆಯಾಗಲಿ” ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ ಯು.ಟಿ. ಖಾದರ್ ಹೇಳಿದರು.

ಅವರು ಇಟಲಿಯ ರೋಮ್ ನಲ್ಲಿರುವ ಕರ್ನಾಟಕ ಮೂಲದ ಕ್ರೈಸ್ತ ಸಂಘಟನೆಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು.
ಅಂತಾರಾಷ್ಟ್ರೀಯ ಅಂತರ್ ಧರ್ಮೀಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರೋಮ್ ಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಸಂತ ಪೀಟರ್ ಪೊಂತಿಫಿಕಾಲ್ ಕೊಲೆಜ್ ನಲ್ಲಿ ‘ಕೊಂಕಣಿ ಕುಟಾಮ್ ರೋಮ್’ ಮತ್ತು ‘ಕನ್ನಡಿಗರ ಒಕ್ಕೂಟ, ರೋಮ್’ ಅವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸ್ಪೀಕರ್ ಖಾದರ್ ಭಾಗವಹಿಸಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರು ಫಾದರ್ ಜಿಲ್ ಡಿಸೋಜಾ, ಯು.ಟಿ. ಖಾದರ್ ರವರ ಸೇವಾ ಸಾಧನೆಯನ್ನು ವಿವರಿಸಿದರು. ಫಾದರ್ ಜೋವಿನ್ ಸಿಕ್ವೆರಾರವರು ಕೊಂಕಣಿ ಸಂಘಟನೆ ಮತ್ತು ಫಾದರ್ ರಿಚಾರ್ಡ್ ಕನ್ನಡ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಸಂತ ಪೀಟರ್ ಪೊಂತಿಫಿಕಾಲ್ ಕೊಲೆಜ್ ನ ರೆಕ್ಟರ್ ಫಾದರ್ ಜೋಸ್ ತಮ್ಮ ಸಂದೇಶ ನೀಡಿ ಶುಭ ಹಾರೈಸಿದರು. ಉಭಯ ಸಂಘಟನೆಗಳ ಪರವಾಗಿ ಖಾದರ್ ಅವರನ್ನು ಸನ್ಮಾನಿಸಲಾಯಿತು.
ಫಾದರ್ ಸೆಬಾಸ್ಟಿಯನ್ ಪ್ರಾರ್ಥನಾ ವಿಧಿ ನೆರವೇರಿಸಿದರು. ಕಾರ್ಯಕ್ರಮದ ಸಂಯೋಜಕ ಫಾದರ್ ಲೋರೆನ್ಸ್ ನೊರೊನ್ಹಾ ಸ್ವಾಗತಿಸಿದರು, ಸಹ-ಸಂಯೋಜಕಿ ವ್ಯಾಟಿಕನ್ ಸಂವಹನ ವಿಭಾಗದ ಧರ್ಮಭಗಿನಿ ಸಿಸ್ಟರ್ ಕಾರ್ಮೆಲ್ ವಂದನಾರ್ಪಣೆಗೈದರು. ಫಾದರ್ ರೊಯ್ಸನ್ ಫೆರ್ನಾಂಡಿಸ್, ಹಿರ್ಗಾನ ಕಾರ್ಯಕ್ರಮವನ್ನು
ನಿರ್ವಹಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು