2:08 AM Sunday1 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು