6:32 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು