10:40 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕೃಷಿ ರಾಸಾಯನಿಕಗಳು ಜೀವ ವೈವಿಧ್ಯಕ್ಕೆ ಮಾರಕವಾಗದಿರಲಿ: ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ

30/11/2024, 16:46

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ಕೃಷಿ ಪರಿಕರಗಳ ಮಾರಾಟಗಾರರ ಜವಾಬ್ದಾರಿ ಹೆಚ್ಚಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಇದರ ಸದುಪಯೋಗ ಆಗಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಭಾರತ ಸರ್ಕಾರ, ಮ್ಯಾನೇಜ್ ಹೈದರಾಬಾದ್, ಕೃಷಿ ವಿಶ್ವವಿದ್ಯಾಲಯ ಧಾರವಾಡ ಮತ್ತು ರಾಯಚೂರು, ಕೃಷಿ ಇಲಾಖೆ – ಕೃಷಿ ತಂತ್ರಜ್ಞರ ಸಂಸ್ಥೆ ಬಳ್ಳಾರಿ ಇವರ ಸಹಯೋಗದಲ್ಲಿ ಬಳ್ಳಾರಿ ನಗರದ ಖಾಸಗಿ ಹೊಟೇಲ್’ನಲ್ಲಿ ಏರ್ಪಡಿಸಿದ್ದ (ಕೃಷಿ ವಿಸ್ತರಣಾ ಸೇವೆ) ಕೃಷಿ ಪರಿಕರಗಳ ಮಾರಾಟಗಾರರಿಗಾಗಿ ಡಿಪ್ಲೋಮಾ ಪ್ರಮಾಣ ಪತ್ರಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೀವು ಕೃಷಿಕರಿಗೆ ಒದಗಿಸುವ ರಾಸಾಯನಿಕ, ಗೊಬ್ಬರ ಅವರ ಬದುಕನ್ನೇ ನಿರ್ಧರಿಸುತ್ತದೆ, ನೀವು ನೀಡುವ ಯಾವುದೇ ವಸ್ತುಗಳು ಕೃಷಿ ಮಾತ್ರವಲ್ಲ, ಇಡೀ ಪರಿಸರದ ಮೇಲೆ ಪರಿಸರ ಬೀರುತ್ತದೆ, ಹೀಗಾಗಿ ನಿಮ್ಮ ಕೆಲಸ ಜವಾಬ್ದಾರಿಯುತವಾದದ್ದು ಎಂದರು.
ರೈತರಿಗೆ ಬೆಳೆ ಚೆನ್ನಾಗಿ ಬಂದರೆ ಮಾತ್ರ ನಿಮಗೆ ಹಣ ಸಿಗುತ್ತದೆ, ಇಲ್ಲದಿದ್ದರೆ ಕಷ್ಟ, ರೈತರಿಗಿಂತ ಸಂಕಷ್ಟದ ಕೆಲಸ ನಿಮ್ಮದು, ನೀವು ಉತ್ತಮ ರಾಸಾಯನಿಕ ನೀಡಿದಾಗ ಉತ್ತಮ ಬೆಳೆ ಬರುತ್ತದೆ, ಅದರಿಂದ ಜನರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ರಾಸಾಯನಿಕಗಳು ಜೀವ ವೈವಿಧ್ಯ, ಜೀವ ಸಂಕುಲವನ್ನು ಹಾಳು ಮಾಡಬಾರದು ಎಂದು ಹೇಳಿದ ಅವರು, ಮನುಷ್ಯ ಬದುಕಬೇಕು ಅದರ ಜೊತೆಗೆ ಎಲ್ಲ ಜೀವಿಗಳು ಕೂಡ ಉಳಿಯಬೇಕು ಎಂದರು.
ಕೃಷಿ ಪರಿಕರಗಳ ಮಾರಾಟಗಾರರ ಕೆಲಸ ಬುದ್ಧಿವಂತರ ಕೆಲಸ, ಜನರ ನಡುವೆ ಇರುವ, ಜನರ ಮನವೊಲಿಸುವ ಕೌಶಲ್ಯ ಇದ್ದವರು ಈ ಕೆಲಸ ಮಾಡಲು ಸಾಧ್ಯ ವಿನಃ ಕೇವಲ ಅತಿ ಹೆಚ್ಚು ಅಂಕ ಗಳಿಸುವರಿಗೆ ಕಷ್ಟಕರವಾದುದು ಎಂದರು.
ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಈ ವೇಳೆ ಡಾ.ಜಾಧವ ಎಸ್.ಎನ್, ಡಾ.ಬಿ.ಡಿ.ಬಿರಾದಾರ, ಸೋಮಸುಂದರ ಕೆ.ಎಂ, ಮಂಜುನಾಥ ಎನ್, ಡಾ.ರವಿಶಂಕರ್ ಜಿ, ಡಾ.ಗೋವಿಂಪ್ಪ ಎಂ.ಆರ್, ದಯಾನಂದ ಎಂ ಸೇರಿದಂತೆ ಮೊದಲಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು